<p><strong>ಚಳ್ಳಕೆರೆ:</strong> ತಾಲ್ಲೂಕಿನಲ್ಲಿ ಈ ಬಾರಿ ಸಕಾಲಕ್ಕೆ ಮಳೆ ಸುರಿದಿದ್ದು, ರೈತರು ಭೂಮಿಯನ್ನು ಬಿತ್ತನೆಗೆ ಸಿದ್ಧಗೊಳಿಸಿದ್ದಾರೆ. ಮುಂಗಾರು ವೇಳೆ ಬಿತ್ತನೆಬೀಜದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಕೃಷಿ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಆಯಾ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಉತ್ತಮ ತಳಿಯ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಕೆ ಮಾಡಬೇಕು. ದಾಸ್ತಾನಿನಲ್ಲಿರುವ ಬಿತ್ತನೆಬೀಜ ಪರಿಶೀಲಿಸಿ ವಿತರಿಸಬೇಕು’ ಎಂದು ಹೇಳಿದರು.</p>.<p>‘ಕೆಲವೆಡೆ ಕೆಟ್ಟಿರುವ ಶುದ್ಧ ಕುಡಿಯುವ ನೀರು ಘಟಕವನ್ನು ಕೂಡಲೇ ದುರಸ್ತಿ ಮಾಡಿಸಿ ಪೂರೈಸಬೇಕು’ ಎಂದು ಇಒ ಅಧಿಕಾರಿ<br />ಗಳಿಗೆ ತಾಕೀತು ಅವರು ಹೇಳಿದರು.</p>.<p>‘ಜಲಜೀವನ್ ಮಿಷನ್ ಕಾಮಗಾರಿ<br />ಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು. ಹೂಳಲು ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಾಲುವೆ ತೋಡುವುದನ್ನು ತಡೆದು ಸೂಕ್ತ ಜಾಗದಲ್ಲಿ ಪೈಪ್ಲೈನ್ ಅಳವಡಿಸಬೇಕು. ವಿವಾದ ಬಗೆಹರಿಸಿ, ಸ್ಮಶಾನ ಜಾಗ ಮಂಜೂರು ಮಾಡಬೇಕು’ ಎಂದು ತಹಶೀಲ್ದಾರ್ಗೆ ಸೂಚಿಸಿದರು.</p>.<p>‘ಕಂದಾಯ ಇಲಾಖೆ ವ್ಯಾಪ್ತಿಯ ರೂಢಿದಾರಿ, ಜಮೀನಿನ ದಾರಿ, ಪೋಡಿ, ಪೌತಿ ಹಾಗೂ ಸರ್ಕಾರಿ ಭೂಮಿ ಒತ್ತುವರಿ ತೆರವಿನ ಕಾರ್ಯವನ್ನು ಚುರುಕುಗೊಳಿಸಲಾಗಿದೆ’ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.</p>.<p>ಗ್ರಾಮೀಣಾಭಿವೃದ್ಧಿ ಯೋಜನೆ ಕಾಮಗಾರಿ ಚುರುಕುಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ನವೀನ್ ಸೂಚಿಸಿದರು. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಇಲಾಖೆ ವತಿಯಿಂದ ಅಭಿನಂದಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹೇಳಿದರು.</p>.<p>ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ, ನಾಮನಿರ್ದೇಶಿತ ಸದಸ್ಯರಾದ ಎಚ್.ವಿ. ಪ್ರಕಾಶ್ಬಾಬು, ದೊರೆ ನಾಗರಾಜ, ಫಕ್ರುದ್ದೀನ್, ಚಂದ್ರಶೇಖರ್, ಸುನಂದಮ್ಮ, ತಾಲ್ಲೂಕು ಪಂಚಾ<br />ಯಿತಿ ಆಡಳಿತಾಧಿಕಾರಿ ರಮೇಶ್ಕುಮಾರ್,ಇ.ಒ ಹನುಮಂತಪ್ಪ ಎಚ್. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ತಾಲ್ಲೂಕಿನಲ್ಲಿ ಈ ಬಾರಿ ಸಕಾಲಕ್ಕೆ ಮಳೆ ಸುರಿದಿದ್ದು, ರೈತರು ಭೂಮಿಯನ್ನು ಬಿತ್ತನೆಗೆ ಸಿದ್ಧಗೊಳಿಸಿದ್ದಾರೆ. ಮುಂಗಾರು ವೇಳೆ ಬಿತ್ತನೆಬೀಜದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಕೃಷಿ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಆಯಾ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಉತ್ತಮ ತಳಿಯ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಕೆ ಮಾಡಬೇಕು. ದಾಸ್ತಾನಿನಲ್ಲಿರುವ ಬಿತ್ತನೆಬೀಜ ಪರಿಶೀಲಿಸಿ ವಿತರಿಸಬೇಕು’ ಎಂದು ಹೇಳಿದರು.</p>.<p>‘ಕೆಲವೆಡೆ ಕೆಟ್ಟಿರುವ ಶುದ್ಧ ಕುಡಿಯುವ ನೀರು ಘಟಕವನ್ನು ಕೂಡಲೇ ದುರಸ್ತಿ ಮಾಡಿಸಿ ಪೂರೈಸಬೇಕು’ ಎಂದು ಇಒ ಅಧಿಕಾರಿ<br />ಗಳಿಗೆ ತಾಕೀತು ಅವರು ಹೇಳಿದರು.</p>.<p>‘ಜಲಜೀವನ್ ಮಿಷನ್ ಕಾಮಗಾರಿ<br />ಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು. ಹೂಳಲು ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಾಲುವೆ ತೋಡುವುದನ್ನು ತಡೆದು ಸೂಕ್ತ ಜಾಗದಲ್ಲಿ ಪೈಪ್ಲೈನ್ ಅಳವಡಿಸಬೇಕು. ವಿವಾದ ಬಗೆಹರಿಸಿ, ಸ್ಮಶಾನ ಜಾಗ ಮಂಜೂರು ಮಾಡಬೇಕು’ ಎಂದು ತಹಶೀಲ್ದಾರ್ಗೆ ಸೂಚಿಸಿದರು.</p>.<p>‘ಕಂದಾಯ ಇಲಾಖೆ ವ್ಯಾಪ್ತಿಯ ರೂಢಿದಾರಿ, ಜಮೀನಿನ ದಾರಿ, ಪೋಡಿ, ಪೌತಿ ಹಾಗೂ ಸರ್ಕಾರಿ ಭೂಮಿ ಒತ್ತುವರಿ ತೆರವಿನ ಕಾರ್ಯವನ್ನು ಚುರುಕುಗೊಳಿಸಲಾಗಿದೆ’ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.</p>.<p>ಗ್ರಾಮೀಣಾಭಿವೃದ್ಧಿ ಯೋಜನೆ ಕಾಮಗಾರಿ ಚುರುಕುಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ನವೀನ್ ಸೂಚಿಸಿದರು. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಇಲಾಖೆ ವತಿಯಿಂದ ಅಭಿನಂದಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹೇಳಿದರು.</p>.<p>ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ, ನಾಮನಿರ್ದೇಶಿತ ಸದಸ್ಯರಾದ ಎಚ್.ವಿ. ಪ್ರಕಾಶ್ಬಾಬು, ದೊರೆ ನಾಗರಾಜ, ಫಕ್ರುದ್ದೀನ್, ಚಂದ್ರಶೇಖರ್, ಸುನಂದಮ್ಮ, ತಾಲ್ಲೂಕು ಪಂಚಾ<br />ಯಿತಿ ಆಡಳಿತಾಧಿಕಾರಿ ರಮೇಶ್ಕುಮಾರ್,ಇ.ಒ ಹನುಮಂತಪ್ಪ ಎಚ್. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>