ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಬಳಿ ಎತ್ತಿನ ಗಾಡಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಮಲ್ಕಾಪುರ ಗ್ರಾಮದ ಪಾಲಯ್ಯ (28), ವಿಜಿಯಪ್ಪ (30) ಮೃತಪಟ್ಟವರು.
ಎತ್ತಿನಗಾಡಿಯಲ್ಲಿದ್ದ ಎಳು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲ್ಕಾಪುರದ ಗ್ರಾಮಸ್ಥರು ಎತ್ತಿನ ಗಾಡಿಯಲ್ಲಿ ಚಿತ್ರಹಳ್ಳಿಯ ಚಿತ್ರಲಿಂಗೇಶ್ವರ ಅಂಬಿನೋತ್ಸವಕ್ಕೆ ತೆರಳುತ್ತಿದ್ದರು. ಶುಕ್ರವಾರ ನಸುಕಿನ 1 ಗಂಟೆ ಸುಮಾರು ಅಪಘಾತ ಸಂಭವಿಸಿದೆ ಎಂದು ಚಿತ್ರಹಳ್ಳಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.