ಹಿರಿಯೂರು: ತಾಲ್ಲೂಕಿನ ಬಾಲೆನಹಳ್ಳಿಯ ಸಮೀಪ ಕ್ಯಾಂಟರ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದು, 27 ಜನರು ಗಾಯಗೊಂಡಿದ್ದಾರೆ.
ಶಿರಾ ತಾಲ್ಲೂಕಿನ ದ್ವಾರನಕುಂಟೆ ಗ್ರಾಮದ ರತ್ನಮ್ಮ (70) ಮೃತರು. ಗಾಯಾಳುಗಳನ್ನು ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ ದ್ವಾರನಕುಂಟೆ ಗ್ರಾಮಸ್ಥರು ಪೂಜೆ ಮುಗಿಸಿಕೊಂಡು ಗುರುವಾರ ನಸುಕಿನಲ್ಲಿ ಕ್ಯಾಂಟರ್ನಲ್ಲಿ ಮರಳುತ್ತಿದ್ದರು. ಹಿರಿಯೂರು–ಚಳ್ಳಕೆರೆ ರಸ್ತೆಯಲ್ಲಿ ಮಣ್ಣು ತುಂಬಿದ ಟಿಪ್ಪರ್ ಕ್ಯಾಂಟರ್ಗೆ ಡಿಕ್ಕಿ ಹೊಡೆದೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತದಿಂದ ರಸ್ತೆಸಂಚಾರಕ್ಕೆ ತೊಂದರೆ ಉಂಟಾಗಿತ್ತು. ವಾಹನಗಳು ಒಂದು ಕಿ.ಮೀ.ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತಿದ್ದವು.