<p><strong>ಹಿರಿಯೂರು</strong>: ಲೋಕೋಪಯೋಗಿ ಇಲಾಖೆಯಿಂದ ₹ 25 ಕೋಟಿ ವೆಚ್ಚದಲ್ಲಿ ನಗರದ ಲಕ್ಕವ್ವನಹಳ್ಳಿ ರಸ್ತೆಯಲ್ಲಿರುವ ನಗರಸಭೆಯ ಜಲ ಶುದ್ಧೀಕರಣ ಘಟಕದಿಂದ ವಾಣಿವಿಲಾಸಪುರ ಗ್ರಾಮದವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೋಮವಾರ ಭೂಮಿಪೂಜೆ ನೆರವೇರಿಸಿದರು.</p>.<p>ತಾಲ್ಲೂಕಿನಲ್ಲಿರುವ ದೊಡ್ಡ ದೊಡ್ಡ ಗ್ರಾಮಗಳ ಮೂಲಕ ರಾಜ್ಯ ಹೆದ್ದಾರಿ ಸಂಪರ್ಕಿಸುವಂತೆ ರಸ್ತೆ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.</p>.<p>ನಗರಸಭೆ ವತಿಯಿಂದ ರಸ್ತೆಯಲ್ಲಿನ ಗುಂಡಿಗಳನ್ನು ಮಣ್ಣಿನಿಂದ ಮುಚ್ಚುವ ಕಾರ್ಯ ಕೈಗೊಂಡಾಗ ಸ್ಥಳೀಯರು ವಿರೋಧಿಸಿದ್ದರು. ಶಾಶ್ವತ ರಸ್ತೆ ನಿರ್ಮಿಸುವಂತೆ ಪ್ರತಿಭಟನೆ ನಡೆಸಿದ್ದರು. ಆಗ ಜನರಿಗೆ ನೀಡಿದ್ದ ಭರವಸೆಯಂತೆ ವಾಣಿವಿಲಾಸಪುರ ಗ್ರಾಮದವರೆಗಿನ ರಸ್ತೆಗೆ ಡಾಂಬರು ಹಾಕಿಸಲಾಗುತ್ತಿದೆ ಎಂದು ನಗರಸಭೆ ಸದಸ್ಯೆ ಮಮತಾ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಮುಖಂಡರಾದ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು, ಈರಲಿಂಗೇಗೌಡ, ದೊಡ್ಡಘಟ್ಟ ಶಿವಕುಮಾರ್, ವಿ. ಶಿವಕುಮಾರ್, ಗಿಡ್ಡೋನಬಹಳ್ಳಿ ಅಶೋಕ್, ತಿಮ್ಮರಾಯಪ್ಪ, ವೆಂಕಟೇಶ್, ಮುರ್ತುಜ, ರಾಮಕೃಷ್ಣ, ಹಬೀಬ್, ಮುನ್ನಾ, ರಾಜೇಶ್ವರಿ, ಧನಂಜಯ್, ನಾಗರಾಜ್, ಚಿಕ್ಕಣ್ಣ, ಬಸವರಾಜ್, ನರಸಿಂಹಣ್ಣ, ರಾಮು, ಜಯಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ಲೋಕೋಪಯೋಗಿ ಇಲಾಖೆಯಿಂದ ₹ 25 ಕೋಟಿ ವೆಚ್ಚದಲ್ಲಿ ನಗರದ ಲಕ್ಕವ್ವನಹಳ್ಳಿ ರಸ್ತೆಯಲ್ಲಿರುವ ನಗರಸಭೆಯ ಜಲ ಶುದ್ಧೀಕರಣ ಘಟಕದಿಂದ ವಾಣಿವಿಲಾಸಪುರ ಗ್ರಾಮದವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೋಮವಾರ ಭೂಮಿಪೂಜೆ ನೆರವೇರಿಸಿದರು.</p>.<p>ತಾಲ್ಲೂಕಿನಲ್ಲಿರುವ ದೊಡ್ಡ ದೊಡ್ಡ ಗ್ರಾಮಗಳ ಮೂಲಕ ರಾಜ್ಯ ಹೆದ್ದಾರಿ ಸಂಪರ್ಕಿಸುವಂತೆ ರಸ್ತೆ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.</p>.<p>ನಗರಸಭೆ ವತಿಯಿಂದ ರಸ್ತೆಯಲ್ಲಿನ ಗುಂಡಿಗಳನ್ನು ಮಣ್ಣಿನಿಂದ ಮುಚ್ಚುವ ಕಾರ್ಯ ಕೈಗೊಂಡಾಗ ಸ್ಥಳೀಯರು ವಿರೋಧಿಸಿದ್ದರು. ಶಾಶ್ವತ ರಸ್ತೆ ನಿರ್ಮಿಸುವಂತೆ ಪ್ರತಿಭಟನೆ ನಡೆಸಿದ್ದರು. ಆಗ ಜನರಿಗೆ ನೀಡಿದ್ದ ಭರವಸೆಯಂತೆ ವಾಣಿವಿಲಾಸಪುರ ಗ್ರಾಮದವರೆಗಿನ ರಸ್ತೆಗೆ ಡಾಂಬರು ಹಾಕಿಸಲಾಗುತ್ತಿದೆ ಎಂದು ನಗರಸಭೆ ಸದಸ್ಯೆ ಮಮತಾ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಮುಖಂಡರಾದ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು, ಈರಲಿಂಗೇಗೌಡ, ದೊಡ್ಡಘಟ್ಟ ಶಿವಕುಮಾರ್, ವಿ. ಶಿವಕುಮಾರ್, ಗಿಡ್ಡೋನಬಹಳ್ಳಿ ಅಶೋಕ್, ತಿಮ್ಮರಾಯಪ್ಪ, ವೆಂಕಟೇಶ್, ಮುರ್ತುಜ, ರಾಮಕೃಷ್ಣ, ಹಬೀಬ್, ಮುನ್ನಾ, ರಾಜೇಶ್ವರಿ, ಧನಂಜಯ್, ನಾಗರಾಜ್, ಚಿಕ್ಕಣ್ಣ, ಬಸವರಾಜ್, ನರಸಿಂಹಣ್ಣ, ರಾಮು, ಜಯಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>