<p><strong>ಹೊಳಲ್ಕೆರೆ</strong>: ತಾಲ್ಲೂಕಿನ ಅರೇಹಳ್ಳಿ ಭೋವಿಹಟ್ಟಿಯಲ್ಲಿ ಶಾಸಕ ಎಂ.ಚಂದ್ರಪ್ಪ ಅವರು ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಈಚೆಗೆ ಚಾಲನೆ ನೀಡಿದರು.</p>.<p>ಗ್ರಾಮದಲ್ಲಿ ಉತ್ತಮ ಮನೆಗಳನ್ನು ಕಟ್ಟಿಸಿಕೊಡುತ್ತೇನೆ. ಹೊಸ ದೇವಸ್ಥಾನ ನಿರ್ಮಿಸಿದ್ದೇನೆ. ಗ್ರಾಮದ ಮತ್ತೊಂದು ದೇವಾಲಯಕ್ಕೆ ₹30 ಲಕ್ಷ ಅನುದಾನ ನೀಡಿದ್ದು, ಅದನ್ನು ಬಳಸಿಕೊಂಡಿಲ್ಲ. ಗ್ರಾಮಸ್ಥರು ಒಟ್ಟಾಗಿ ಸೇರಿ ಹೊಸ ದೇವಸ್ಥಾನ ಕಟ್ಟಿಸಿಕೊಳ್ಳಿ ಎಂದು ಚಂದ್ರಪ್ಪ ಹೇಳಿದರು.</p>.<p>ತಾಲ್ಲೂಕಿನಲ್ಲಿ ರೈತರ ಅನುಕೂಲಕ್ಕಾಗಿ 400ಕ್ಕೂ ಹೆಚ್ಚು ಹೊಸ ಚೆಕ್ ಡ್ಯಾಂ, ಕೆರೆ, ಬ್ಯಾರೇಜ್ ನಿರ್ಮಿಸಿದ್ದೇನೆ. ವಿದ್ಯುತ್, ಕುಡಿಯುವ ನೀರು, ಕೆರೆ ತುಂಬಿಸುವ ಯೋಜನೆ ಅನುಷ್ಠಾನ ಮಾಡಲಾಗಿದೆ. ಎಲ್ಲಾ ಕಡೆ ರಸ್ತೆ, ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದರು.</p>.<p>ಗ್ರಾಮದ ಮುಖಂಡರಾದ ಕಾಟಪ್ಪ, ರಾಜಣ್ಣ, ಬೋರಪ್ಪ, ಪ್ರಸನ್ನ, ರಾಮಣ್ಣ, ರಂಗಸ್ವಾಮಿ, ಓಬಣ್ಣ, ಕೆ.ಆರ್.ಐ.ಡಿ.ಎಲ್. ಎಂಜಿನಿಯರ್ ತೇಜಸ್ ಹಾಗೂ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ</strong>: ತಾಲ್ಲೂಕಿನ ಅರೇಹಳ್ಳಿ ಭೋವಿಹಟ್ಟಿಯಲ್ಲಿ ಶಾಸಕ ಎಂ.ಚಂದ್ರಪ್ಪ ಅವರು ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಈಚೆಗೆ ಚಾಲನೆ ನೀಡಿದರು.</p>.<p>ಗ್ರಾಮದಲ್ಲಿ ಉತ್ತಮ ಮನೆಗಳನ್ನು ಕಟ್ಟಿಸಿಕೊಡುತ್ತೇನೆ. ಹೊಸ ದೇವಸ್ಥಾನ ನಿರ್ಮಿಸಿದ್ದೇನೆ. ಗ್ರಾಮದ ಮತ್ತೊಂದು ದೇವಾಲಯಕ್ಕೆ ₹30 ಲಕ್ಷ ಅನುದಾನ ನೀಡಿದ್ದು, ಅದನ್ನು ಬಳಸಿಕೊಂಡಿಲ್ಲ. ಗ್ರಾಮಸ್ಥರು ಒಟ್ಟಾಗಿ ಸೇರಿ ಹೊಸ ದೇವಸ್ಥಾನ ಕಟ್ಟಿಸಿಕೊಳ್ಳಿ ಎಂದು ಚಂದ್ರಪ್ಪ ಹೇಳಿದರು.</p>.<p>ತಾಲ್ಲೂಕಿನಲ್ಲಿ ರೈತರ ಅನುಕೂಲಕ್ಕಾಗಿ 400ಕ್ಕೂ ಹೆಚ್ಚು ಹೊಸ ಚೆಕ್ ಡ್ಯಾಂ, ಕೆರೆ, ಬ್ಯಾರೇಜ್ ನಿರ್ಮಿಸಿದ್ದೇನೆ. ವಿದ್ಯುತ್, ಕುಡಿಯುವ ನೀರು, ಕೆರೆ ತುಂಬಿಸುವ ಯೋಜನೆ ಅನುಷ್ಠಾನ ಮಾಡಲಾಗಿದೆ. ಎಲ್ಲಾ ಕಡೆ ರಸ್ತೆ, ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದರು.</p>.<p>ಗ್ರಾಮದ ಮುಖಂಡರಾದ ಕಾಟಪ್ಪ, ರಾಜಣ್ಣ, ಬೋರಪ್ಪ, ಪ್ರಸನ್ನ, ರಾಮಣ್ಣ, ರಂಗಸ್ವಾಮಿ, ಓಬಣ್ಣ, ಕೆ.ಆರ್.ಐ.ಡಿ.ಎಲ್. ಎಂಜಿನಿಯರ್ ತೇಜಸ್ ಹಾಗೂ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>