<p><strong>ನಾಯಕನಹಟ್ಟಿ</strong>: ‘ಹೋಬಳಿಯ ಜಂಬಯ್ಯನಹಟ್ಟಿಯಿಂದ ತಿಮ್ಮಪ್ಪಯ್ಯನಹಳ್ಳಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿಗೆ ₹ 3 ಕೋಟಿ ಅನುದಾನ ಒದಗಿಸಲಾಗಿದೆ’ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.</p>.<p>ತಿಮ್ಮಪ್ಪಯ್ಯನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗ್ರಾಮದ ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕವನ್ನು ಕಲ್ಪಿಸುತ್ತದೆ. ಕಳೆದ ವರ್ಷ ಸುರಿದ ಭಾರಿ ಮಳೆಗೆ ಹಲವು ಕೆರೆಗಳು ತುಂಬಿ ಕೋಡಿಯಲ್ಲಿ ನೀರು ಹರಿದ ಪರಿಣಾಮ ಗಜ್ಜುಗಾನಹಳ್ಳಿ, ರಾಮಸಾಗರ, ತಿಮ್ಮಪ್ಪಯ್ಯನಹಳ್ಳಿ, ಜಂಬಯ್ಯನಹಟ್ಟಿ ಗ್ರಾಮಗಳ ಬಳಿ ಸೇತುವೆ ಮೇಲೆ ನೀರು ಹರಿದಿತ್ತು’ ಎಂದರು.</p>.<p>ಮಳೆ ಬಂದರೆ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗುತ್ತದೆ. ಆದಷ್ಟು ಬೇಗ ಕಾಮಗಾರಿ ಆರಂಭಿಸಿ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಹಕೀಂ ಅಹಮ್ಮದ್ ಅವರಿಗೆ ಸೂಚಿಸಿದರು.</p>.<p>ತಿಮ್ಮಪ್ಪಯ್ಯನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಟಿ.ಎನ್.ಶೈಲಾ, ಉಪಾಧ್ಯಕ್ಷ ಸೋಮಶೇಖರ್, ಸದಸ್ಯರಾದ ರೇವಣ್ಣ, ವಿಜಯಕುಮಾರ್, ಅಶೋಕ, ಶಾಂತಮ್ಮ, ಮುಖಂಡರಾದ ಬಾಲರಾಜ್, ಬಂಡೆಕಪಿಲೆ ಓಬಣ್ಣ, ತಿಪ್ಪೇಸ್ವಾಮಿ, ಪ್ರಕಾಶ್, ಕಾಟಯ್ಯ, ಪೊಲೀಸ್ ವೃತ್ತನಿರೀಕ್ಷಕ ಹನುಮಂತಪ್ಪ ಶಿರೆಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ</strong>: ‘ಹೋಬಳಿಯ ಜಂಬಯ್ಯನಹಟ್ಟಿಯಿಂದ ತಿಮ್ಮಪ್ಪಯ್ಯನಹಳ್ಳಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿಗೆ ₹ 3 ಕೋಟಿ ಅನುದಾನ ಒದಗಿಸಲಾಗಿದೆ’ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.</p>.<p>ತಿಮ್ಮಪ್ಪಯ್ಯನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗ್ರಾಮದ ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕವನ್ನು ಕಲ್ಪಿಸುತ್ತದೆ. ಕಳೆದ ವರ್ಷ ಸುರಿದ ಭಾರಿ ಮಳೆಗೆ ಹಲವು ಕೆರೆಗಳು ತುಂಬಿ ಕೋಡಿಯಲ್ಲಿ ನೀರು ಹರಿದ ಪರಿಣಾಮ ಗಜ್ಜುಗಾನಹಳ್ಳಿ, ರಾಮಸಾಗರ, ತಿಮ್ಮಪ್ಪಯ್ಯನಹಳ್ಳಿ, ಜಂಬಯ್ಯನಹಟ್ಟಿ ಗ್ರಾಮಗಳ ಬಳಿ ಸೇತುವೆ ಮೇಲೆ ನೀರು ಹರಿದಿತ್ತು’ ಎಂದರು.</p>.<p>ಮಳೆ ಬಂದರೆ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗುತ್ತದೆ. ಆದಷ್ಟು ಬೇಗ ಕಾಮಗಾರಿ ಆರಂಭಿಸಿ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಹಕೀಂ ಅಹಮ್ಮದ್ ಅವರಿಗೆ ಸೂಚಿಸಿದರು.</p>.<p>ತಿಮ್ಮಪ್ಪಯ್ಯನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಟಿ.ಎನ್.ಶೈಲಾ, ಉಪಾಧ್ಯಕ್ಷ ಸೋಮಶೇಖರ್, ಸದಸ್ಯರಾದ ರೇವಣ್ಣ, ವಿಜಯಕುಮಾರ್, ಅಶೋಕ, ಶಾಂತಮ್ಮ, ಮುಖಂಡರಾದ ಬಾಲರಾಜ್, ಬಂಡೆಕಪಿಲೆ ಓಬಣ್ಣ, ತಿಪ್ಪೇಸ್ವಾಮಿ, ಪ್ರಕಾಶ್, ಕಾಟಯ್ಯ, ಪೊಲೀಸ್ ವೃತ್ತನಿರೀಕ್ಷಕ ಹನುಮಂತಪ್ಪ ಶಿರೆಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>