<p><strong>ಚಿತ್ರದುರ್ಗ: </strong>ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಪ್ಪಿಸಲು ವೇಗ ನಿಯಂತ್ರಕ ಮೀಟರ್ ಅಳವಡಿಸುವುದು ಸೂಕ್ತ. ಇದರಿಂದ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅಪಘಾತಗಳಿಂದ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಅಪಘಾತ ವಲಯಗಳಲ್ಲಿ ಜಾಗೃತಿ ಮೂಡಿಸುವ ಫಲಕ ಅಳವಡಿಸಬೇಕು. ರಸ್ತೆಗಳ ಮೇಲೆ ಮುನ್ನೆಚ್ಚರಿಕೆಯ ಸಂದೇಶಗಳನ್ನು ಚಾಲಕರಿಗೆ ಕಾಣುವಂತೆ ಹಾಕಬೇಕು. ಹಾಳಾದ ರಸ್ತೆಗಳನ್ನು ಸರಿಪಡಿಸಬೇಕು’ ಎಂದರು.</p>.<p>‘ಸಂಚಾರಕ್ಕೆ ಅಡಚಣೆಯುಂಟು ಮಾಡುವ ರಸ್ತೆಬದಿಯ ಮರಗಳನ್ನು ತೆರವುಗೊಳಿಸಬೇಕು. ಅಪಘಾತಕ್ಕೆ ಕಾರಣವಾಗುವ ರಸ್ತೆ ಗುಂಡಿಗಳನ್ನು ಮುಚ್ಚಬೇಕು’ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>‘ಅಪಘಾತಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ಸೀಟ್ಬೆಲ್ಟ್ ಧರಿಸದೆ ವಾಹನ ಚಾಲನೆ ಮಾಡುವವರ ಚಾಲನಾ ಪರವಾನಗಿ ಅಮಾನತುಗೊಳಿಸಲು ಅವಕಾಶವಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ವಲಯಗಳಿವೆ. ರಸ್ತೆ ಗುಣಮಟ್ಟಕ್ಕೆ ಒತ್ತು ನೀಡುವ ಅಗತ್ಯವಿದೆ. ಇದರಿಂದ ಅಪಘಾತ ತಡೆಯಲು ಹಾಗೂ ಸಾವಿನ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಗಂಭೀರವಾಗಿ ಆಲೋಚಿಸಬೇಕು’ ಎಂದು ಸೂಚನೆ ನೀಡಿದರು.</p>.<p>ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ಟಿಒ) ಜಿ.ಎಸ್.ಹೆಗಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ, ನಗರಸಭೆ ಆಯುಕ್ತ ಜಿ.ಟಿ.ಹನುಮಂತರಾಜು ಇದ್ದರು.</p>.<p class="Subhead"><strong>1,051 ಅಪಘಾತ ಪ್ರಕರಣ</strong></p>.<p>ಲಾಕ್ಡೌನ್ ನಿಯಮ ಸಡಿಲಗೊಂಡು ವಾಹನ ಸಂಚಾರ ಸಹಜ ಸ್ಥಿತಿಗೆ ಮರಳಿದಂತೆ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂಬುದನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ಜಿಲ್ಲೆಯಲ್ಲಿ ಜನವರಿಯಿಂದ ಸೆಪ್ಟೆಂಬರ್ವರೆಗೆ 1,051 ಅಪಘಾತ ಪ್ರಕರಣ ಸಂಭವಿಸಿವೆ. ಏಪ್ರಿಲ್ನಲ್ಲಿ 38, ಮೇ 100, ಜೂನ್ 134, ಜುಲೈ 115, ಆಗಸ್ಟ್ 140 ಹಾಗೂ ಸೆಪ್ಟೆಂಬರ್ನಲ್ಲಿ 131 ಅಪಘಾತ ಪ್ರಕರಣ ದಾಖಲಾಗಿವೆ. ಜನವರಿಯಿಂದ ಮಾರ್ಚ್ವರೆಗೆ 393 ಅಪಘಾತ ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಪ್ಪಿಸಲು ವೇಗ ನಿಯಂತ್ರಕ ಮೀಟರ್ ಅಳವಡಿಸುವುದು ಸೂಕ್ತ. ಇದರಿಂದ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅಪಘಾತಗಳಿಂದ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಅಪಘಾತ ವಲಯಗಳಲ್ಲಿ ಜಾಗೃತಿ ಮೂಡಿಸುವ ಫಲಕ ಅಳವಡಿಸಬೇಕು. ರಸ್ತೆಗಳ ಮೇಲೆ ಮುನ್ನೆಚ್ಚರಿಕೆಯ ಸಂದೇಶಗಳನ್ನು ಚಾಲಕರಿಗೆ ಕಾಣುವಂತೆ ಹಾಕಬೇಕು. ಹಾಳಾದ ರಸ್ತೆಗಳನ್ನು ಸರಿಪಡಿಸಬೇಕು’ ಎಂದರು.</p>.<p>‘ಸಂಚಾರಕ್ಕೆ ಅಡಚಣೆಯುಂಟು ಮಾಡುವ ರಸ್ತೆಬದಿಯ ಮರಗಳನ್ನು ತೆರವುಗೊಳಿಸಬೇಕು. ಅಪಘಾತಕ್ಕೆ ಕಾರಣವಾಗುವ ರಸ್ತೆ ಗುಂಡಿಗಳನ್ನು ಮುಚ್ಚಬೇಕು’ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>‘ಅಪಘಾತಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ಸೀಟ್ಬೆಲ್ಟ್ ಧರಿಸದೆ ವಾಹನ ಚಾಲನೆ ಮಾಡುವವರ ಚಾಲನಾ ಪರವಾನಗಿ ಅಮಾನತುಗೊಳಿಸಲು ಅವಕಾಶವಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ವಲಯಗಳಿವೆ. ರಸ್ತೆ ಗುಣಮಟ್ಟಕ್ಕೆ ಒತ್ತು ನೀಡುವ ಅಗತ್ಯವಿದೆ. ಇದರಿಂದ ಅಪಘಾತ ತಡೆಯಲು ಹಾಗೂ ಸಾವಿನ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಗಂಭೀರವಾಗಿ ಆಲೋಚಿಸಬೇಕು’ ಎಂದು ಸೂಚನೆ ನೀಡಿದರು.</p>.<p>ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ಟಿಒ) ಜಿ.ಎಸ್.ಹೆಗಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ, ನಗರಸಭೆ ಆಯುಕ್ತ ಜಿ.ಟಿ.ಹನುಮಂತರಾಜು ಇದ್ದರು.</p>.<p class="Subhead"><strong>1,051 ಅಪಘಾತ ಪ್ರಕರಣ</strong></p>.<p>ಲಾಕ್ಡೌನ್ ನಿಯಮ ಸಡಿಲಗೊಂಡು ವಾಹನ ಸಂಚಾರ ಸಹಜ ಸ್ಥಿತಿಗೆ ಮರಳಿದಂತೆ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂಬುದನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ಜಿಲ್ಲೆಯಲ್ಲಿ ಜನವರಿಯಿಂದ ಸೆಪ್ಟೆಂಬರ್ವರೆಗೆ 1,051 ಅಪಘಾತ ಪ್ರಕರಣ ಸಂಭವಿಸಿವೆ. ಏಪ್ರಿಲ್ನಲ್ಲಿ 38, ಮೇ 100, ಜೂನ್ 134, ಜುಲೈ 115, ಆಗಸ್ಟ್ 140 ಹಾಗೂ ಸೆಪ್ಟೆಂಬರ್ನಲ್ಲಿ 131 ಅಪಘಾತ ಪ್ರಕರಣ ದಾಖಲಾಗಿವೆ. ಜನವರಿಯಿಂದ ಮಾರ್ಚ್ವರೆಗೆ 393 ಅಪಘಾತ ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>