ಶೃಂಗಸಭೆಯ ಸಂಯೋಜಕರ ಕೋರಿಕೆ ಮೇರೆಗೆ ತಮ್ಮ ವಿಚಾರಗಳನ್ನು ಸಂಕ್ಷಿಪ್ತವಾಗಿ ವಿಡಿಯೊದಲ್ಲಿ ದಾಖಲಿಸಿ ಕಳುಹಿಸಿದ್ದಾರೆ. ಸ್ವಾಮೀಜಿಯವರ ವಿಚಾರಗಳನ್ನು ಜಗತ್ತಿನ ಅನೇಕ ಭಾಷೆಗಳಲ್ಲಿ ಭಾಷಾಂತರಿಸಿ ಪ್ರಸಾರ ಮಾಡುವುದಾಗಿ ಸಂಯೋಜಕರು ಮಾಹಿತಿ ನೀಡಿದ್ದಾರೆ. ಸ್ಕಾಟ್ಲೆಂಡ್ನ ಗ್ಲಾಸ್ಗೋದಲ್ಲಿ ಅ.31ರಿಂದ ನ.12ರವರೆಗೆ ನಡೆಯುವ ವಿಶ್ವ ರಾಷ್ಟ್ರೀಯ ಸಂಸ್ಥೆಯ 26ನೇ ಅಂತರರಾಷ್ಟ್ರೀಯ ಸಮ್ಮೇಳ
ನಕ್ಕೆ ಪೂರಕವಾಗಿ ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಶೃಂಗಸಭೆಯನ್ನು ಆಯೋಜಿಸಿದ್ದರು.
ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಸಾಮಾಜಿಕ ಕಳಕಳಿ ಹಾಗೂ ಸೇವೆಯನ್ನು ಗುರುತಿಸಿ ಪೋಪ್ ಫ್ರಾನ್ಸಿಸ್ ಅವರು ಆಹ್ವಾನ ನೀಡಿದ್ದಾರೆ. ಆದರೆ ಆ ಸಭೆಗೂ ಶ್ರೀಗಳು ಗೈರಾಗುತ್ತಿದ್ದಾರೆ.