<p><strong>ಚಿತ್ರದುರ್ಗ: </strong>ನೂತನವಾಗಿ ನಿರ್ಮಾಣವಾಗಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಲ್ಲಿ ₹ 25 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೈದ್ಯಕೀಯ ಕಾಲೇಜಿಗೆ ಇನ್ನೂ ಅಗತ್ಯವಿರುವ ಅನುದಾನವನ್ನು ನೀಡಲು ಸಭೆ ತೀರ್ಮಾನಿಸಿತು. ಇದನ್ನು ಎಲ್ಲ ಸದಸ್ಯರು ಒಮ್ಮತದಿಂದ ಅನುಮೋದಿಸಿದರು.</p>.<p>‘ಸಾಂಕ್ರಾಮಿಕ ರೋಗ ತಡೆಗಟ್ಟಲು ಡಿಎಂಎಫ್ ನಿಧಿಯಲ್ಲಿ ಶೇ 30ರಷ್ಟು ಅನುದಾನವನ್ನು ಬಳಕೆ ಮಾಡಿಕೊಳ್ಳಲು ಅವಕಾಶವಿದೆ. ನಿಧಿಯಲ್ಲಿ ಕೋವಿಡ್ಗೆ ₹ 36 ಕೋಟಿ ಮೀಸಲಿರಿಸಲಾಗಿದೆ. ಇದರಲ್ಲಿ ₹ 8.97 ಕೋಟಿಯನ್ನು ವೆಚ್ಚ ಮಾಡಲಾಗಿದೆ. ಕೋವಿಡ್ಗೆ ಅಗತ್ಯವಿರುವ ವೈದ್ಯಕೀಯ ಪರಿಕರ, ಲ್ಯಾಬ್ ಸೇರಿದಂತೆ ಇತರ ಉದ್ದೇಶಕ್ಕೆ ಖರ್ಚು ಮಾಡಬಹುದಾಗಿದೆ’ ಎಂದರು.</p>.<p>‘2017-18ರಲ್ಲಿ ₹21 ಕೋಟಿ, 2019-20ರಲ್ಲಿ ₹65 ಕೋಟಿ, 2020-2021ರಲ್ಲಿ ₹53 ಕೋಟಿ ಸೇರಿ ₹139 ಕೋಟಿ ಸಂಗ್ರಹವಾಗಿದೆ. ಈ ನಿಧಿಗೆ ಕ್ರಿಯಾ ಯೋಜನೆ ತಯಾರಿಸಿ ಅನುಮೋದಿಸಲಾಗಿದೆ. ಇದರಲ್ಲಿ ₹ 85 ಕೋಟಿಯ 131 ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ಕೇವಲ ಐದು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>2017-18ರಿಂದ 2020-21ನೇ ಸಾಲಿನವರೆಗೆ 167 ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆ ತಯಾರಿಸ ಲಾಗಿದೆ. ಇದರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದರೂ ಇನ್ನು<br />ಕೆಲ ಕಾಮಗಾರಿಗಳು ಆರಂಭವಾಗಿಲ್ಲ. ಇವು ಗಳನ್ನು ರದ್ದುಪಡಿಸಿ ಇತರೆ ಕಾಮಗಾರಿ ಕೈಗೊಳ್ಳಲು ಸಭೆ ನಿರ್ಣಯಿಸಿತು.</p>.<p>ಸಂಸದ ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಗೂಳಿಹಟ್ಟಿ ಡಿ.ಶೇಖರ್, ಎಂ.ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಲಿಂಗರಾಜು ಇದ್ದರು.</p>.<p>***</p>.<p class="Briefhead"><strong>ಆಡಳಿತಾತ್ಮಕ ಅನುಮೋದನೆ</strong></p>.<p>ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ 22 ಕಾಮಗಾರಿಗಳಿಗೆ ₹ 23 ಕೋಟಿ, ಪರಿಸರ ಸಂರಕ್ಷಣೆ ಮತ್ತು ಪರಿಸರ ಮಾಲಿನ್ಯ ತಡೆಗಟ್ಟುವ ಐದು ಕಾಮಗಾರಿಗಳಿಗೆ ₹ 7 ಕೋಟಿ, ಆರೋಗ್ಯ ಇಲಾಖೆಗೆ ಸಂಬಂಧಿಸಿದ 22 ಕಾಮಗಾರಿಗೆ ₹ 6 ಕೋಟಿ, ಶಿಕ್ಷಣಕ್ಕೆ ಸಂಬಂಧಿಸಿದ 55 ಕಾಮಗಾರಿಗೆ ₹ 29 ಕೋಟಿ ಮೀಸಲಿಡಲಾಗಿದೆ.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 10 ಕಾಮಗಾರಿಗೆ ₹ 10 ಕೋಟಿ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಕಲ್ಯಾಣ ಇಲಾಖೆಯ ಆರು ಕಾಮಗಾರಿಗೆ ₹ 4 ಕೋಟಿ, ಕೌಶಲ್ಯಾಭಿವೃದ್ಧಿಯ 4 ಕಾಮಗಾರಿಗೆ ₹ 1 ಕೋಟಿ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ 7 ಕಾಮಗಾರಿಗೆ ₹ 1 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ನೂತನವಾಗಿ ನಿರ್ಮಾಣವಾಗಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಲ್ಲಿ ₹ 25 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೈದ್ಯಕೀಯ ಕಾಲೇಜಿಗೆ ಇನ್ನೂ ಅಗತ್ಯವಿರುವ ಅನುದಾನವನ್ನು ನೀಡಲು ಸಭೆ ತೀರ್ಮಾನಿಸಿತು. ಇದನ್ನು ಎಲ್ಲ ಸದಸ್ಯರು ಒಮ್ಮತದಿಂದ ಅನುಮೋದಿಸಿದರು.</p>.<p>‘ಸಾಂಕ್ರಾಮಿಕ ರೋಗ ತಡೆಗಟ್ಟಲು ಡಿಎಂಎಫ್ ನಿಧಿಯಲ್ಲಿ ಶೇ 30ರಷ್ಟು ಅನುದಾನವನ್ನು ಬಳಕೆ ಮಾಡಿಕೊಳ್ಳಲು ಅವಕಾಶವಿದೆ. ನಿಧಿಯಲ್ಲಿ ಕೋವಿಡ್ಗೆ ₹ 36 ಕೋಟಿ ಮೀಸಲಿರಿಸಲಾಗಿದೆ. ಇದರಲ್ಲಿ ₹ 8.97 ಕೋಟಿಯನ್ನು ವೆಚ್ಚ ಮಾಡಲಾಗಿದೆ. ಕೋವಿಡ್ಗೆ ಅಗತ್ಯವಿರುವ ವೈದ್ಯಕೀಯ ಪರಿಕರ, ಲ್ಯಾಬ್ ಸೇರಿದಂತೆ ಇತರ ಉದ್ದೇಶಕ್ಕೆ ಖರ್ಚು ಮಾಡಬಹುದಾಗಿದೆ’ ಎಂದರು.</p>.<p>‘2017-18ರಲ್ಲಿ ₹21 ಕೋಟಿ, 2019-20ರಲ್ಲಿ ₹65 ಕೋಟಿ, 2020-2021ರಲ್ಲಿ ₹53 ಕೋಟಿ ಸೇರಿ ₹139 ಕೋಟಿ ಸಂಗ್ರಹವಾಗಿದೆ. ಈ ನಿಧಿಗೆ ಕ್ರಿಯಾ ಯೋಜನೆ ತಯಾರಿಸಿ ಅನುಮೋದಿಸಲಾಗಿದೆ. ಇದರಲ್ಲಿ ₹ 85 ಕೋಟಿಯ 131 ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ಕೇವಲ ಐದು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>2017-18ರಿಂದ 2020-21ನೇ ಸಾಲಿನವರೆಗೆ 167 ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆ ತಯಾರಿಸ ಲಾಗಿದೆ. ಇದರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದರೂ ಇನ್ನು<br />ಕೆಲ ಕಾಮಗಾರಿಗಳು ಆರಂಭವಾಗಿಲ್ಲ. ಇವು ಗಳನ್ನು ರದ್ದುಪಡಿಸಿ ಇತರೆ ಕಾಮಗಾರಿ ಕೈಗೊಳ್ಳಲು ಸಭೆ ನಿರ್ಣಯಿಸಿತು.</p>.<p>ಸಂಸದ ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಗೂಳಿಹಟ್ಟಿ ಡಿ.ಶೇಖರ್, ಎಂ.ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಲಿಂಗರಾಜು ಇದ್ದರು.</p>.<p>***</p>.<p class="Briefhead"><strong>ಆಡಳಿತಾತ್ಮಕ ಅನುಮೋದನೆ</strong></p>.<p>ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ 22 ಕಾಮಗಾರಿಗಳಿಗೆ ₹ 23 ಕೋಟಿ, ಪರಿಸರ ಸಂರಕ್ಷಣೆ ಮತ್ತು ಪರಿಸರ ಮಾಲಿನ್ಯ ತಡೆಗಟ್ಟುವ ಐದು ಕಾಮಗಾರಿಗಳಿಗೆ ₹ 7 ಕೋಟಿ, ಆರೋಗ್ಯ ಇಲಾಖೆಗೆ ಸಂಬಂಧಿಸಿದ 22 ಕಾಮಗಾರಿಗೆ ₹ 6 ಕೋಟಿ, ಶಿಕ್ಷಣಕ್ಕೆ ಸಂಬಂಧಿಸಿದ 55 ಕಾಮಗಾರಿಗೆ ₹ 29 ಕೋಟಿ ಮೀಸಲಿಡಲಾಗಿದೆ.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 10 ಕಾಮಗಾರಿಗೆ ₹ 10 ಕೋಟಿ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಕಲ್ಯಾಣ ಇಲಾಖೆಯ ಆರು ಕಾಮಗಾರಿಗೆ ₹ 4 ಕೋಟಿ, ಕೌಶಲ್ಯಾಭಿವೃದ್ಧಿಯ 4 ಕಾಮಗಾರಿಗೆ ₹ 1 ಕೋಟಿ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ 7 ಕಾಮಗಾರಿಗೆ ₹ 1 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>