‘ಬಯಲುಸೀಮೆ ಪ್ರದೇಶಗಳಲ್ಲಿ ಅಂತರ್ಜಲ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಜತೆಗೆ ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.
‘ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕೋಲಾರ, ರಾಮನಗರ, ತುಮಕೂರು, ವಿಜಯಪುರ ಜಿಲ್ಲೆ ಸೇರಿ ಒಟ್ಟು 14 ಜಿಲ್ಲೆ ಒಳಗೊಂಡ 58 ತಾಲ್ಲೂಕುಗಳ 70 ವಿಧಾನಸಭಾ ಕ್ಷೇತ್ರಗಳು ಮಂಡಳಿ ವ್ಯಾಪ್ತಿಗೆ ಒಳಪಟ್ಟಿವೆ’ ಎಂದರು.