ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯಿಂದ ₹ 70 ಸಾವಿರ ದೋಚಿ ಪರಾರಿ

Last Updated 19 ಡಿಸೆಂಬರ್ 2020, 14:28 IST
ಅಕ್ಷರ ಗಾತ್ರ

ಭರಮಸಾಗರ:ಇಲ್ಲಿನ ಹಳೇ ಬಸ್ ನಿಲ್ದಾಣದ ಶುಕ್ರವಾರ ಕಳ್ಳನೊಬ್ಬ ಮಹಿಳೆಯ ಕೈಯಲ್ಲಿದ್ದ ₹ 70 ಸಾವಿರ ನಗದು ದೋಚಿ ಹಣ ಪರಾರಿಯಾಗಿದ್ದಾನೆ.

ಕೊಳಹಾಳು ಗೊಲ್ಲರಹಟ್ಟಿ ಗ್ರಾಮದ ತಿಪ್ಪಮ್ಮ ಶಿವಣ್ಣ ಹಣ ಕಳೆದುಕೊಂಡವರು. ಅವರು ಇಲ್ಲಿನ ಕೆನರಾ ಬ್ಯಾಂಕಿನಲ್ಲಿ ತಮ್ಮ ಠೇವಣಿ ಬಾಂಡ್ ಮೇಲೆ ₹ 70 ಸಾವಿರ ಸಾಲ ಪಡೆದು ಹಣವನ್ನು ಪ್ಲಾಸ್ಟಿಕ್ ಚೀಲದಲ್ಲಿರಿಸಿಕೊಂಡು ಗ್ರಾಮಕ್ಕೆ ಹೋಗಲು ಬಸ್ ನಿಲ್ದಾಣದ ಬಳಿ ನಿಂತಿದ್ದರು. ಆಗ ಬೈಕ್ ಮೇಲೆ ಬಂದ ಯುವಕನೊಬ್ಬ ಕೈಯಲ್ಲಿದ್ದ ಹಣದ ಚೀಲವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಮಹಿಳೆ ಕೂಗಿಕೊಂಡಾಗ ಅಲ್ಲಿದ್ದ ಸಾರ್ವಜನಿಕರು ಯುವಕನನ್ನು ಹಿಂಬಾಲಿಸಿದರೂ ತಪ್ಪಿಸಿಕೊಂಡಿದ್ದಾನೆ.

ಈ ಬಗ್ಗೆ ಮಹಿಳೆ ದೂರು ನೀಡಿದ್ದು,ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT