ಕೊಳಹಾಳು ಗೊಲ್ಲರಹಟ್ಟಿ ಗ್ರಾಮದ ತಿಪ್ಪಮ್ಮ ಶಿವಣ್ಣ ಹಣ ಕಳೆದುಕೊಂಡವರು. ಅವರು ಇಲ್ಲಿನ ಕೆನರಾ ಬ್ಯಾಂಕಿನಲ್ಲಿ ತಮ್ಮ ಠೇವಣಿ ಬಾಂಡ್ ಮೇಲೆ ₹ 70 ಸಾವಿರ ಸಾಲ ಪಡೆದು ಹಣವನ್ನು ಪ್ಲಾಸ್ಟಿಕ್ ಚೀಲದಲ್ಲಿರಿಸಿಕೊಂಡು ಗ್ರಾಮಕ್ಕೆ ಹೋಗಲು ಬಸ್ ನಿಲ್ದಾಣದ ಬಳಿ ನಿಂತಿದ್ದರು. ಆಗ ಬೈಕ್ ಮೇಲೆ ಬಂದ ಯುವಕನೊಬ್ಬ ಕೈಯಲ್ಲಿದ್ದ ಹಣದ ಚೀಲವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಮಹಿಳೆ ಕೂಗಿಕೊಂಡಾಗ ಅಲ್ಲಿದ್ದ ಸಾರ್ವಜನಿಕರು ಯುವಕನನ್ನು ಹಿಂಬಾಲಿಸಿದರೂ ತಪ್ಪಿಸಿಕೊಂಡಿದ್ದಾನೆ.