ಬಸವೇಶ್ವರ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಪ್ರಶಾಂತ್ ಮಾತನಾಡಿ, ‘ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿರುವವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು. ಸರ್ಕಾರದ ನಿರ್ದೇಶನದಂತೆ ಪ್ರತಿ ಮಾದರಿಯ ಪರೀಕ್ಷೆಗೆ ₹ 3,000 ನಿಗದಿಪಡಿಸಲಾಗಿದೆ. ಆಯುಷ್ಮಾನ್ ಭಾರತ ಸೌಲಭ್ಯವೂ ಕೋವಿಡ್ಗೆ ಅನ್ವಯಿಸುತ್ತದೆ. ಸರ್ಕಾರಿ ಆಸ್ಪತ್ರೆಯ ಶಿಫಾರಸು ಪತ್ರ ಹೊಂದಿದವರ ವೆಚ್ಚವನ್ನು ಸರ್ಕಾರ ಭರಿಸಲಿದೆ’ ಎಂದರು.