<p><strong>ಹೊಸನಗರ</strong>: ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ನಿರ್ಮಿಸಿರುವ ನೂತನ ಗ್ರಂಥಾಲಯ ಕಟ್ಟಡವನ್ನು (ಅರಿವು ಕೇಂದ್ರ) ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. </p>.<p>ನಂತರ ಮಾತನಾಡಿ, ‘ಅರಿವು ಕೇಂದ್ರಗಳು ಗ್ರಾಮೀಣ ಯುವಜನರ ಆಶಾಕಿರಣವಾಗಿವೆ. ಈಗಾಗಲೇ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಧ್ಯಕ್ಷರು ಹಾಗೂ ಸದಸ್ಯರ ಬೇಡಿಕೆಗೆ ಅನುಗುಣವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗಿದೆ’ ಎಂದರು. </p>.<p>ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಚಿದಂಬರ ಹೂವಿನ ಕೋಣೆ ಮಾತನಾಡಿ, ‘ಮಾರುತಿಪುರ ಗ್ರಾಮ ಪಂಚಾಯಿತಿಯಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಸುಸಜ್ಜಿತ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ’ ಎಂದರು. </p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಇಂದ್ರೇಶ್ ಎನ್., ಸದಸ್ಯರಾದ ಕಲಾವತಿ ಎಚ್., ಪಿ. ಸುಶೀಲಾ, ಶಂಕರ್ ಶೆಟ್ಟಿ, ಸುಮಾ ಎಚ್., ಅವಿನಾಶ್ ಎಸ್.ಜೆ., ನಾರಾಯಣಪ್ಪ, ಸುವರ್ಣ ಕೆ.ಡಿ., ದೇವರಾಜ್, ಗಂಗಾ, ಭಾನುಮತಿ, ಚಂದ್ರಪ್ಪ ಇದ್ದರು. ಸದಸ್ಯೆ ದೀಪಿಕಾ ಆರ್.ಕೆ. ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ</strong>: ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ನಿರ್ಮಿಸಿರುವ ನೂತನ ಗ್ರಂಥಾಲಯ ಕಟ್ಟಡವನ್ನು (ಅರಿವು ಕೇಂದ್ರ) ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. </p>.<p>ನಂತರ ಮಾತನಾಡಿ, ‘ಅರಿವು ಕೇಂದ್ರಗಳು ಗ್ರಾಮೀಣ ಯುವಜನರ ಆಶಾಕಿರಣವಾಗಿವೆ. ಈಗಾಗಲೇ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಧ್ಯಕ್ಷರು ಹಾಗೂ ಸದಸ್ಯರ ಬೇಡಿಕೆಗೆ ಅನುಗುಣವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗಿದೆ’ ಎಂದರು. </p>.<p>ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಚಿದಂಬರ ಹೂವಿನ ಕೋಣೆ ಮಾತನಾಡಿ, ‘ಮಾರುತಿಪುರ ಗ್ರಾಮ ಪಂಚಾಯಿತಿಯಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಸುಸಜ್ಜಿತ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ’ ಎಂದರು. </p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಇಂದ್ರೇಶ್ ಎನ್., ಸದಸ್ಯರಾದ ಕಲಾವತಿ ಎಚ್., ಪಿ. ಸುಶೀಲಾ, ಶಂಕರ್ ಶೆಟ್ಟಿ, ಸುಮಾ ಎಚ್., ಅವಿನಾಶ್ ಎಸ್.ಜೆ., ನಾರಾಯಣಪ್ಪ, ಸುವರ್ಣ ಕೆ.ಡಿ., ದೇವರಾಜ್, ಗಂಗಾ, ಭಾನುಮತಿ, ಚಂದ್ರಪ್ಪ ಇದ್ದರು. ಸದಸ್ಯೆ ದೀಪಿಕಾ ಆರ್.ಕೆ. ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>