ಈ ಹಿಂದೆ 2017ರಲ್ಲಿಯೂ ಭಾರಿ ಹಾನಿ ಉಂಟಾಗಿದ್ದಾಗ ಗ್ರಾಮ ಲೆಕ್ಕಾಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆದರೆ ಪರಿಹಾರ ದೊರಕಿಲ್ಲ. ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಳ್ಳದ ಒತ್ತುವರಿಯನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಿ, ರೈತರಿಗೆ ಆಗುತ್ತಿರುವ ಹಾನಿ ತಪ್ಪಿಸಬೇಕು ಎಂದುಬಸವರಾಜಪ್ಪ, ಎಚ್.ಎಸ್. ಉಮಾಪತಿ, ನಟರಾಜ ತಿಪ್ಪೇಸ್ವಾಮಿ, ಅಣ್ಣಪ್ಪ ಮನವಿ ಮಾಡಿದ್ದಾರೆ.