ಈ ಬಾರಿ ಮುಂಗಾರು ಅತ್ಯಂತ ಚುರುಕಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆ ಬೀಳುತ್ತಲಿದೆ. ಬಿತ್ತನೆಗೆ ಸಕಾಲವಾಗಿರುವಂತೆ ಗಿಡ–ಮರಗಳನ್ನು ನೆಡಲೂ ಸಹ ಅತ್ಯಂತ ಸಕಾಲ. ಪ್ರತಿವರ್ಷದಂತೆ ಈ ವರ್ಷವೂ ಶ್ರೀಮಠದ ಆವರಣ, ಹೊಲ, ತೋಟಗಳಲ್ಲಿ ಶ್ರೀಗಂಧ, ನೇರಲ, ಪೇರಲ, ಮಹಾಘನಿ, ತೆಂಗು, ಅಡಿಕೆ, ಮಾವು, ಬೇವು ಮುಂತಾದ ವೈವಿಧ್ಯಮಯ ಗಿಡಗಳನ್ನು ನೆಡಲಾಗುತ್ತಿದೆ.