‘ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸುಸಂಸ್ಕೃತ ವ್ಯಕ್ತಿ. ವಯಸ್ಸು, ಅನುಭವ ಹಾಗೂ ಜ್ಞಾನದಲ್ಲಿ ಹಿರಿಯರು. ಯಾರಿಗೂ ಕೇಡು ಬಯಸದ ನಿರುಪದ್ರವಿ. ಸಮಾಜದಲ್ಲಿರುವ ಅನ್ಯಾಯಗಳ ವಿರುದ್ಧ ಪ್ರತಿಭಟನೆ ಮಾಡುವ ಮನೋಭಾವದವರು. ಇಂತಹ ಹಿರಿಯರ ಬಗ್ಗೆ ಅವಹೇಳ ಮಾಡುವುದು ತಮ್ಮ ವ್ಯಕ್ತಿತ್ವಕ್ಕೆ ತಾವೇ ಕಳಂಕ ಅಂಟಿಸಿಕೊಂಡಂತೆ’ ಎಂದು ಯತ್ನಾಳ್ ಹೆಸರು ಉಲ್ಲೇಖಿಸದೇ ಕಿಡಿಕಾರಿದ್ದಾರೆ.