‘ಶರಣರದು ನಡೆ, ನುಡಿ ಒಂದಾದ ಪ್ರಾಯೋಗಿಕ ಮತ್ತು ವೈಚಾರಿಕ ಧರ್ಮ. ಅವರ ಹೋರಾಟ ಸನಾತನ ಗೊಡ್ಡು ಪರಂಪರೆಗಳ ವಿರುದ್ಧ ನಡೆದಿದೆ. ವೇದ, ಶಾಸ್ತ್ರ, ಪುರಾಣ, ಆಗಮಗಳ ವಿರುದ್ಧ ಧ್ವನಿ ಎತ್ತಿದ್ದನ್ನು ವಚನಗಳಲ್ಲಿ ಕಾಣಬಹುದು. ಈ ಸನಾತನ ಪರಂಪರೆಯವರೇ ಕಲ್ಯಾಣದಲ್ಲಿ ರಕ್ತಕ್ರಾಂತಿಯ ಬೀಜ ಬಿತ್ತಿ ವಚನ ಸಾಹಿತ್ಯವನ್ನು ಭಸ್ಮ ಮಾಡಲು ಮುಂದಾಗಿದ್ದು. ಅದರ ಪಳೆಯುಳಿಕೆಗಳು ಇಂದಿಗೂ ಜೀವಂತವಾಗಿವೆ’ ಎಂದು ಕಿಡಿ ಕಾರಿದ್ದಾರೆ.