ಕಂಚೀವರದರಾಜಸ್ವಾಮಿ ಭಕ್ತರು ಮಕರ ಸಂಕ್ರಾಂತಿ ದಿನ ಕಾಡಿನಲ್ಲಿ ಬೇಟೆಯಾಡಿ ಮೊಲವೊಂದನ್ನು ಜೀವಂತವಾಗಿ ಹಿಡಿದು ದೇಗುಲಕ್ಕೆ ತರುತ್ತಾರೆ. ನಂತರ ಅದರ ಕಿವಿಚುಚ್ಚಿ ಓಲೆ ಹಾಕಿ, ವಿಶೇಷ ಅಲಂಕಾರ ಮಾಡಿ, ನಾಮಧಾರಣೆ ಮಾಡುವ ಮೂಲಕ ರಾಜಬೀದಿಯಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮಾಡುತ್ತಾರೆ. ನಂತರ ಆ ಮೊಲಕ್ಕೆ ಸ್ವಲ್ಪವೂ ಪೆಟ್ಟು ಮಾಡದಂತೆ ಪುನಃ ಕಾಡಿಗೆ ಬಿಡುವ ಮೂಲಕ ಇಲ್ಲಿನ ಜನರು ಸಂಕ್ರಾಂತಿ ಆಚರಿಸುವುದು ವಿಶೇಷ.