<p><strong>ಚಿತ್ರದುರ್ಗ: </strong>‘ದೇಶದ 565 ರಾಜ್ಯಗಳನ್ನು ಒಗ್ಗೂಡಿಸಿ, ಸಮಗ್ರ ಭಾರತವನ್ನು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ವಿಲೀನಗೊಳಿಸಿದ ಕೀರ್ತಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರಿಗೆ ಸಲ್ಲುತ್ತದೆ’ ಎಂದು ರಾಜ್ಯಸಭಾ ಮಾಜಿ ಸದಸ್ಯ ಎಚ್. ಹನುಮಂತಪ್ಪ ಹೇಳಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಥಮ ಉಪಪ್ರಧಾನಿ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೇಘಾಲಯದಲ್ಲಿ 85 ರಾಜ್ಯಗಳ ರಾಜ-ರಾಣಿಯರ ಸಭೆ ಕರೆದು ಎಲ್ಲರನ್ನೂಒಗ್ಗೂಡಿಸಿದರು. ಹೀಗೆ ವಿವಿಧ ರಾಜ್ಯಗಳನ್ನು ಪ್ರಜಾಪ್ರಭುತ್ವ ರಾಷ್ಟ್ರದೊಂದಿಗೆ ವಿಲೀನಗೊಳಿಸಿದ ಪಟೇಲರು ಮಹಾನ್ ದೇಶಪ್ರೇಮಿ. ಭಾರತ ಸ್ವಾತಂತ್ರ್ಯ ರಾಷ್ಟ್ರವಾಗುವಲ್ಲಿಯೂ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ಉಕ್ಕಿನ ಮನುಷ್ಯ ಎಂದು ಹೇಳಿದರು.</p>.<p>‘ಅಧಿಕಾರಕ್ಕಾಗಿ ಕಾಂಗ್ರೆಸ್ ಸ್ಥಾಪನೆಯಾಗಲಿಲ್ಲ. ಅದು ಒಲಿದು ಬರುತ್ತದೆ ಎಂಬುದು ಕಾಂಗ್ರೆಸ್ಸಿಗರಿಗೆ ಗೊತ್ತಿರಲಿಲ್ಲ. ಈಗ ಬಿಜೆಪಿ ಅಧಿಕಾರದಲ್ಲಿದೆ. ಈ ಅವಧಿಯಲ್ಲಿ ದುರಾಡಳಿತ ನಡೆದರೆ ಅದನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ನ ಮುಖಂಡರು, ಕಾರ್ಯಕರ್ತರು ಮುಂದಾಗಬೇಕು. ನಾವು ಸರ್ದಾರ್ಜೀ, ನೆಹರೂ ಹಾಗೂ ಇಂದಿರಾಗಾಂಧಿ ಮೊಮ್ಮಕ್ಕಳು ಎಂಬುದನ್ನು ಮರೆಯಬೇಡಿ. ದೇಶವನ್ನು ಕಟ್ಟುವಲ್ಲಿ, ಮುನ್ನಡೆಸುವಲ್ಲಿ ಕಾಂಗ್ರೆಸ್ನವರು ಎಂತಹ ಮಹತ್ಕಾರ್ಯಗಕ್ಕಾದರೂ ಸಿದ್ಧರಿರಬೇಕು’ ಎಂದು ಸಲಹೆ ನೀಡಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಾಜ್ಪೀರ್, ಮಾಜಿ ಅಧ್ಯಕ್ಷ ಜಿ. ಪಾತ್ಯರಾಜನ್, ಮುಖಂಡರಾದ ಎಂ. ಅಜ್ಜಣ್ಣ, ಸಂಪತ್ಕುಮಾರ್, ಎನ್.ಡಿ. ಕುಮಾರ್, ನೇತಾ ತಿಪ್ಪೇಸ್ವಾಮಿ, ನಿರಂಜನಮೂರ್ತಿ, ಕೂದ್ದೂಸ್, ಮುದಾಸಿರ್, ನಜ್ಮತಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ದೇಶದ 565 ರಾಜ್ಯಗಳನ್ನು ಒಗ್ಗೂಡಿಸಿ, ಸಮಗ್ರ ಭಾರತವನ್ನು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ವಿಲೀನಗೊಳಿಸಿದ ಕೀರ್ತಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರಿಗೆ ಸಲ್ಲುತ್ತದೆ’ ಎಂದು ರಾಜ್ಯಸಭಾ ಮಾಜಿ ಸದಸ್ಯ ಎಚ್. ಹನುಮಂತಪ್ಪ ಹೇಳಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಥಮ ಉಪಪ್ರಧಾನಿ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೇಘಾಲಯದಲ್ಲಿ 85 ರಾಜ್ಯಗಳ ರಾಜ-ರಾಣಿಯರ ಸಭೆ ಕರೆದು ಎಲ್ಲರನ್ನೂಒಗ್ಗೂಡಿಸಿದರು. ಹೀಗೆ ವಿವಿಧ ರಾಜ್ಯಗಳನ್ನು ಪ್ರಜಾಪ್ರಭುತ್ವ ರಾಷ್ಟ್ರದೊಂದಿಗೆ ವಿಲೀನಗೊಳಿಸಿದ ಪಟೇಲರು ಮಹಾನ್ ದೇಶಪ್ರೇಮಿ. ಭಾರತ ಸ್ವಾತಂತ್ರ್ಯ ರಾಷ್ಟ್ರವಾಗುವಲ್ಲಿಯೂ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ಉಕ್ಕಿನ ಮನುಷ್ಯ ಎಂದು ಹೇಳಿದರು.</p>.<p>‘ಅಧಿಕಾರಕ್ಕಾಗಿ ಕಾಂಗ್ರೆಸ್ ಸ್ಥಾಪನೆಯಾಗಲಿಲ್ಲ. ಅದು ಒಲಿದು ಬರುತ್ತದೆ ಎಂಬುದು ಕಾಂಗ್ರೆಸ್ಸಿಗರಿಗೆ ಗೊತ್ತಿರಲಿಲ್ಲ. ಈಗ ಬಿಜೆಪಿ ಅಧಿಕಾರದಲ್ಲಿದೆ. ಈ ಅವಧಿಯಲ್ಲಿ ದುರಾಡಳಿತ ನಡೆದರೆ ಅದನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ನ ಮುಖಂಡರು, ಕಾರ್ಯಕರ್ತರು ಮುಂದಾಗಬೇಕು. ನಾವು ಸರ್ದಾರ್ಜೀ, ನೆಹರೂ ಹಾಗೂ ಇಂದಿರಾಗಾಂಧಿ ಮೊಮ್ಮಕ್ಕಳು ಎಂಬುದನ್ನು ಮರೆಯಬೇಡಿ. ದೇಶವನ್ನು ಕಟ್ಟುವಲ್ಲಿ, ಮುನ್ನಡೆಸುವಲ್ಲಿ ಕಾಂಗ್ರೆಸ್ನವರು ಎಂತಹ ಮಹತ್ಕಾರ್ಯಗಕ್ಕಾದರೂ ಸಿದ್ಧರಿರಬೇಕು’ ಎಂದು ಸಲಹೆ ನೀಡಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಾಜ್ಪೀರ್, ಮಾಜಿ ಅಧ್ಯಕ್ಷ ಜಿ. ಪಾತ್ಯರಾಜನ್, ಮುಖಂಡರಾದ ಎಂ. ಅಜ್ಜಣ್ಣ, ಸಂಪತ್ಕುಮಾರ್, ಎನ್.ಡಿ. ಕುಮಾರ್, ನೇತಾ ತಿಪ್ಪೇಸ್ವಾಮಿ, ನಿರಂಜನಮೂರ್ತಿ, ಕೂದ್ದೂಸ್, ಮುದಾಸಿರ್, ನಜ್ಮತಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>