<p><strong>ಚಿತ್ರದುರ್ಗ</strong>: ‘ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡಿ ಕಾಮಗಾರಿ ಈಗಾಗಲೇ ಪ್ರಾರಂಭಿಸಲಾಗಿದೆ. ಇದನ್ನು ಅವೈಜ್ಞಾನಿಕ ಎನ್ನುವುದರಿಂದ ಏನೂ ಪ್ರಯೋಜನವಿಲ್ಲ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. </p>.<p>ನಗರದ ಕುಂಚಿಗನಾಳ್ ಕಣಿವೆ ಬಳಿ ನಿರ್ಮಾಣವಾಗುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ಮಾತನಾಡಿದರು. </p>.<p>‘ಲೋಕೋಪಯೋಗಿ ಇಲಾಖೆಯು ಜಿಲ್ಲಾಡಳಿತ ಭವನ ಕಟ್ಟಡ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲಿದೆ. ಕಟ್ಟಡ ನಿರ್ಮಾಣದ ಕಾರ್ಯ ಅಂತಿಮ ಹಂತದಲ್ಲಿದೆ’ ಎಂದರು. </p>.<p>‘ಜನವರಿ ವೇಳೆಗೆ ನೂತನ ಜಿಲ್ಲಾಧಿಕಾರಿ ಕಚೇರಿ ಲೋಕಾರ್ಪಣೆಗೊಂಡು ದೈನಂದಿನ ಕಾರ್ಯ ಚಟುವಟಿಕೆಗಳು ಪ್ರಾರಂಭವಾಗಲಿವೆ. ಆರಂಭದಲ್ಲಿ ₹25 ಕೋಟಿ ವೆಚ್ಚದಲ್ಲಿ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಗುಡ್ಡವನ್ನು ಕಡಿದು ನಿರ್ಮಾಣ ಕಟ್ಟಡ ಕಾಮಗಾರಿ ಮಾಡಬೇಕಾದ್ದರಿಂದ ಹಣ ಸಾಲುವುದಿಲ್ಲ ಎಂದು ಯೋಜನೆಯನ್ನು ₹47 ಕೋಟಿಗೆ ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದರು. </p>.<p>‘ಅಗತ್ಯ ಮೂಲ ಸೌಲಭ್ಯ, ಅಗ್ನಿ ನಿಯಂತ್ರಕ ವ್ಯವಸ್ಥೆ, ಕಟ್ಟಡದ ಸುತ್ತಲೂ ರಕ್ಷಣಾಗೋಡೆ ಸೇರಿದಂತೆ ಪೀಠೋಪಕರಣಕ್ಕಾಗಿ ಹೆಚ್ಚುವರಿಯಾಗಿ ₹15 ಕೋಟಿ ಅನುದಾನಕ್ಕೆ ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಶೇ 4ರಷ್ಟು ಜಿಎಸ್ಟಿ ಹಾಗೂ ಕಾಮಗಾರಿ ವೆಚ್ಚದಲ್ಲಿ ಉಂಟಾಗುವ ಹೆಚ್ಚಳಕ್ಕೂ ಅನುದಾನ ಬೇಕಾಗಿದೆ’ ಎಂದರು. </p>.<p>‘ಹಳೆ ರಾಷ್ಟ್ರೀಯ ಹೆದ್ದಾರಿಯಿಂದ ನೂತನ ಜಿಲ್ಲಾಧಿಕಾರಿ ಕಚೇರಿಗೆ ಸಂಪರ್ಕಿಸಲು ₹5 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಿಸಲು ಡಿಎಂಎಫ್ ಅನುದಾನ ನೀಡಲು ಚರ್ಚಿಸಲಾಗುತ್ತಿದೆ. ನೂತನ ಕಚೇರಿ ನಗರದ ಹೊರ ವಲಯದಲ್ಲಿ ಇರುವುದರಿಂದ ಜನರಿಗೆ ತೊಂದರೆಯಾಗದಂತೆ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ಕಚೇರಿಗಳು ನಗರದಲ್ಲಿಯೇ ಕಾರ್ಯನಿರ್ವಹಿಸಲಿವೆ’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಲೋಕೋಪಯೋಗಿ ಸಚಿವರಿಗೆ ಮಾಹಿತಿ ನೀಡಿದರು. </p>.<p>ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಬಿ.ಯೋಗೀಶ್ ಬಾಬು, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ತಹಶೀಲ್ದಾರ್ ಗೋವಿಂದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡಿ ಕಾಮಗಾರಿ ಈಗಾಗಲೇ ಪ್ರಾರಂಭಿಸಲಾಗಿದೆ. ಇದನ್ನು ಅವೈಜ್ಞಾನಿಕ ಎನ್ನುವುದರಿಂದ ಏನೂ ಪ್ರಯೋಜನವಿಲ್ಲ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. </p>.<p>ನಗರದ ಕುಂಚಿಗನಾಳ್ ಕಣಿವೆ ಬಳಿ ನಿರ್ಮಾಣವಾಗುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ಮಾತನಾಡಿದರು. </p>.<p>‘ಲೋಕೋಪಯೋಗಿ ಇಲಾಖೆಯು ಜಿಲ್ಲಾಡಳಿತ ಭವನ ಕಟ್ಟಡ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲಿದೆ. ಕಟ್ಟಡ ನಿರ್ಮಾಣದ ಕಾರ್ಯ ಅಂತಿಮ ಹಂತದಲ್ಲಿದೆ’ ಎಂದರು. </p>.<p>‘ಜನವರಿ ವೇಳೆಗೆ ನೂತನ ಜಿಲ್ಲಾಧಿಕಾರಿ ಕಚೇರಿ ಲೋಕಾರ್ಪಣೆಗೊಂಡು ದೈನಂದಿನ ಕಾರ್ಯ ಚಟುವಟಿಕೆಗಳು ಪ್ರಾರಂಭವಾಗಲಿವೆ. ಆರಂಭದಲ್ಲಿ ₹25 ಕೋಟಿ ವೆಚ್ಚದಲ್ಲಿ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಗುಡ್ಡವನ್ನು ಕಡಿದು ನಿರ್ಮಾಣ ಕಟ್ಟಡ ಕಾಮಗಾರಿ ಮಾಡಬೇಕಾದ್ದರಿಂದ ಹಣ ಸಾಲುವುದಿಲ್ಲ ಎಂದು ಯೋಜನೆಯನ್ನು ₹47 ಕೋಟಿಗೆ ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದರು. </p>.<p>‘ಅಗತ್ಯ ಮೂಲ ಸೌಲಭ್ಯ, ಅಗ್ನಿ ನಿಯಂತ್ರಕ ವ್ಯವಸ್ಥೆ, ಕಟ್ಟಡದ ಸುತ್ತಲೂ ರಕ್ಷಣಾಗೋಡೆ ಸೇರಿದಂತೆ ಪೀಠೋಪಕರಣಕ್ಕಾಗಿ ಹೆಚ್ಚುವರಿಯಾಗಿ ₹15 ಕೋಟಿ ಅನುದಾನಕ್ಕೆ ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಶೇ 4ರಷ್ಟು ಜಿಎಸ್ಟಿ ಹಾಗೂ ಕಾಮಗಾರಿ ವೆಚ್ಚದಲ್ಲಿ ಉಂಟಾಗುವ ಹೆಚ್ಚಳಕ್ಕೂ ಅನುದಾನ ಬೇಕಾಗಿದೆ’ ಎಂದರು. </p>.<p>‘ಹಳೆ ರಾಷ್ಟ್ರೀಯ ಹೆದ್ದಾರಿಯಿಂದ ನೂತನ ಜಿಲ್ಲಾಧಿಕಾರಿ ಕಚೇರಿಗೆ ಸಂಪರ್ಕಿಸಲು ₹5 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಿಸಲು ಡಿಎಂಎಫ್ ಅನುದಾನ ನೀಡಲು ಚರ್ಚಿಸಲಾಗುತ್ತಿದೆ. ನೂತನ ಕಚೇರಿ ನಗರದ ಹೊರ ವಲಯದಲ್ಲಿ ಇರುವುದರಿಂದ ಜನರಿಗೆ ತೊಂದರೆಯಾಗದಂತೆ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ಕಚೇರಿಗಳು ನಗರದಲ್ಲಿಯೇ ಕಾರ್ಯನಿರ್ವಹಿಸಲಿವೆ’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಲೋಕೋಪಯೋಗಿ ಸಚಿವರಿಗೆ ಮಾಹಿತಿ ನೀಡಿದರು. </p>.<p>ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಬಿ.ಯೋಗೀಶ್ ಬಾಬು, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ತಹಶೀಲ್ದಾರ್ ಗೋವಿಂದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>