<p><strong>ಹಿರಿಯೂರು:</strong> ‘ಅಮೆರಿಕಾಗೆ ಹೋಗುವಷ್ಟು ಅಕ್ಷರ ಜ್ಞಾನ ನೀಡಿರುವ ನನ್ನೂರಿನ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮುಚ್ಚಲು ನನ್ನೂರ ಜನ ಅವಕಾಶ ಕೊಡಬೇಡಿ’ ಎಂದು ಅಮೆರಿಕದಲ್ಲಿ ನೆಲೆಸಿರುವ ಶ್ರೀನಾಥ್ ಕಳಕಳಿಯ ಮನವಿ ಮಾಡಿದರು.</p>.<p>ತಾಲ್ಲೂಕಿನ ಕಸವನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಗೆ ಶುಕ್ರವಾರ ಕುಟುಂಬದವರೊಟ್ಟಿಗೆ ಭೇಟಿ ನೀಡಿದ್ದ ಅವರು ಹೊಸವರ್ಷದ ಶುಭಾಶಯ ಕೋರಿ, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಜೊತೆ ಭೋಜನ ಸವಿದರು.</p>.<p>‘ಕನ್ನಡ ಕೇವಲ ಮಾತೃಭಾಷೆಯಲ್ಲ. ಅದು ನಮಗೆಲ್ಲ ಅನ್ನದ ಭಾಷೆ. ನನ್ನಂತಹ ಲಕ್ಷಾಂತರ ಜನರಿಗೆ ಅಕ್ಷರದ ಅರಿವು ಮೂಡಿಸಿದ್ದು ಇದೇ ಸರ್ಕಾರಿ ಕನ್ನಡ ಶಾಲೆಗಳು. ಕನ್ನಡದ ಮಹತ್ವ, ಸರ್ಕಾರಿ ಶಾಲೆಗಳ ಕೊಡುಗೆಯನ್ನು ಹೊರನಾಡು–ಹೊರದೇಶಗಳಲ್ಲಿರುವ ಕನ್ನಡಿಗರು ಸ್ಮರಿಸದೇ ಇರುವ ದಿನಗಳಿಲ್ಲ’ ಎಂದು ಹೇಳಿದರು.</p>.<p>‘ನಾವು ಅಟ್ಲಾಂಟಾದಲ್ಲಿದ್ದರೂ ಕರ್ನಾಟಕ ರಾಜ್ಯೋತ್ಸವ, ಕನ್ನಡ ಕಾರ್ಯಕ್ರಮಗಳು, ಅಕ್ಕ ಸಮ್ಮೇಳನ ಇತ್ಯಾದಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇವೆ. ಕನ್ನಡದವರೆಲ್ಲ ಒಟ್ಟಾಗಿ ಹಬ್ಬ, ಹರಿದಿನಗಳನ್ನು ಆಚರಿಸುತ್ತೇವೆ. ಕನ್ನಡದಲ್ಲಿ ಚರ್ಚಾಗೋಷ್ಠಿ, ಹಾಡುಗಳು, ಸಂವಾದ ಕಾರ್ಯಕ್ರಮಗಳನ್ನು ನಡೆಸುತ್ತೇವೆ’ ಎಂದು ಅವರು ತಿಳಿಸಿದರು.</p>.<p>‘ನಮ್ಮೂರಿನ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಲು ಸದಾ ಸಿದ್ದನಿದ್ದೇನೆ. ಸರ್ಕಾರಿ ಶಾಲೆಗಳು ನಮ್ಮ ನಾಡಿನ ಅಸ್ಮಿತೆ ಇದ್ದಂತೆ. ಖಾಸಗಿ ಲಾಬಿಗೆ ಮಣಿದು ಕೋಟ್ಯಂತರ ಜನರಿಗೆ ಬದುಕು ಕಟ್ಟಿಕೊಟ್ಟಿರುವ ಕನ್ನಡ ಶಾಲೆಗಳ ಬಾಗಿಲು ಹಾಕಲು ಬಿಡಬಾರದು’ ಎಂದು ಶ್ರೀನಾಥ್ ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್, ಮುಖ್ಯ ಶಿಕ್ಷಕ ರಂಗನಾಥ್, ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ್, ರಾಮಚಂದ್ರ ಕಸವನಹಳ್ಳಿ, ಶ್ರೀನಿವಾಸ್, ಸಹಶಿಕ್ಷಕ ಬಸವರಾಜ್, ಗ್ರಾಮಸ್ಥರು, ಅಂಗನವಾಡಿ ಶಿಕ್ಷಕಿ ಹಾಗೂ ಮಕ್ಕಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ‘ಅಮೆರಿಕಾಗೆ ಹೋಗುವಷ್ಟು ಅಕ್ಷರ ಜ್ಞಾನ ನೀಡಿರುವ ನನ್ನೂರಿನ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮುಚ್ಚಲು ನನ್ನೂರ ಜನ ಅವಕಾಶ ಕೊಡಬೇಡಿ’ ಎಂದು ಅಮೆರಿಕದಲ್ಲಿ ನೆಲೆಸಿರುವ ಶ್ರೀನಾಥ್ ಕಳಕಳಿಯ ಮನವಿ ಮಾಡಿದರು.</p>.<p>ತಾಲ್ಲೂಕಿನ ಕಸವನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಗೆ ಶುಕ್ರವಾರ ಕುಟುಂಬದವರೊಟ್ಟಿಗೆ ಭೇಟಿ ನೀಡಿದ್ದ ಅವರು ಹೊಸವರ್ಷದ ಶುಭಾಶಯ ಕೋರಿ, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಜೊತೆ ಭೋಜನ ಸವಿದರು.</p>.<p>‘ಕನ್ನಡ ಕೇವಲ ಮಾತೃಭಾಷೆಯಲ್ಲ. ಅದು ನಮಗೆಲ್ಲ ಅನ್ನದ ಭಾಷೆ. ನನ್ನಂತಹ ಲಕ್ಷಾಂತರ ಜನರಿಗೆ ಅಕ್ಷರದ ಅರಿವು ಮೂಡಿಸಿದ್ದು ಇದೇ ಸರ್ಕಾರಿ ಕನ್ನಡ ಶಾಲೆಗಳು. ಕನ್ನಡದ ಮಹತ್ವ, ಸರ್ಕಾರಿ ಶಾಲೆಗಳ ಕೊಡುಗೆಯನ್ನು ಹೊರನಾಡು–ಹೊರದೇಶಗಳಲ್ಲಿರುವ ಕನ್ನಡಿಗರು ಸ್ಮರಿಸದೇ ಇರುವ ದಿನಗಳಿಲ್ಲ’ ಎಂದು ಹೇಳಿದರು.</p>.<p>‘ನಾವು ಅಟ್ಲಾಂಟಾದಲ್ಲಿದ್ದರೂ ಕರ್ನಾಟಕ ರಾಜ್ಯೋತ್ಸವ, ಕನ್ನಡ ಕಾರ್ಯಕ್ರಮಗಳು, ಅಕ್ಕ ಸಮ್ಮೇಳನ ಇತ್ಯಾದಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇವೆ. ಕನ್ನಡದವರೆಲ್ಲ ಒಟ್ಟಾಗಿ ಹಬ್ಬ, ಹರಿದಿನಗಳನ್ನು ಆಚರಿಸುತ್ತೇವೆ. ಕನ್ನಡದಲ್ಲಿ ಚರ್ಚಾಗೋಷ್ಠಿ, ಹಾಡುಗಳು, ಸಂವಾದ ಕಾರ್ಯಕ್ರಮಗಳನ್ನು ನಡೆಸುತ್ತೇವೆ’ ಎಂದು ಅವರು ತಿಳಿಸಿದರು.</p>.<p>‘ನಮ್ಮೂರಿನ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಲು ಸದಾ ಸಿದ್ದನಿದ್ದೇನೆ. ಸರ್ಕಾರಿ ಶಾಲೆಗಳು ನಮ್ಮ ನಾಡಿನ ಅಸ್ಮಿತೆ ಇದ್ದಂತೆ. ಖಾಸಗಿ ಲಾಬಿಗೆ ಮಣಿದು ಕೋಟ್ಯಂತರ ಜನರಿಗೆ ಬದುಕು ಕಟ್ಟಿಕೊಟ್ಟಿರುವ ಕನ್ನಡ ಶಾಲೆಗಳ ಬಾಗಿಲು ಹಾಕಲು ಬಿಡಬಾರದು’ ಎಂದು ಶ್ರೀನಾಥ್ ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್, ಮುಖ್ಯ ಶಿಕ್ಷಕ ರಂಗನಾಥ್, ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ್, ರಾಮಚಂದ್ರ ಕಸವನಹಳ್ಳಿ, ಶ್ರೀನಿವಾಸ್, ಸಹಶಿಕ್ಷಕ ಬಸವರಾಜ್, ಗ್ರಾಮಸ್ಥರು, ಅಂಗನವಾಡಿ ಶಿಕ್ಷಕಿ ಹಾಗೂ ಮಕ್ಕಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>