<p><strong>ಚಿತ್ರದುರ್ಗ</strong>: ‘ಮನುಕುಲದ ಶ್ರೇಯಸ್ಸಿಗೆ ಕಾಯಕ ತತ್ವಗಳನ್ನು ಒಳಗೊಂಡ ಉತ್ತಮ ಸಂದೇಶ ನೀಡಿದ ಮಹನೀಯರು ಸವಿತಾ ಮಹರ್ಷಿ. ಅವರು ಪ್ರತಿಪಾದಿಸಿದ ತತ್ವ ಎಲ್ಲ ವರ್ಗಗಳಿಗೂ ಅನ್ವಯಿಸುತ್ತದೆ’ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಶನಿವಾರ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>‘ಸವಿತಾ ಮಹರ್ಷಿ ಸಿದ್ಧಾಂತ ಮತ್ತು ಬೋಧನೆ ಬಹಳ ಜನರಿಗೆ ತಿಳಿದಿಲ್ಲ. ಮನುಕುಲದ ಉದ್ಧಾರಕ್ಕಾಗಿ ಅವರು ನೀಡಿರುವ ಸಂದೇಶ ಉತ್ತಮ ಸಮಾಜಕ್ಕೆ ಸ್ಫೂರ್ತಿಯಾಗಿದೆ. ಪ್ರತಿ ಹಳ್ಳಿಯಲ್ಲಿ ಸವಿತಾ ಸಮಾಜ<br />ನೆಲೆಸಿದ್ದು, ಪ್ರತಿಯೊಂದು ಶುಭ ಕಾರ್ಯಗಳಿಗೂ ಈ ಸಮಾಜ ಸೇವೆ ಸಲ್ಲಿಸುತ್ತದೆ’ ಎಂದರು.</p>.<p>‘ಸಾಧಕರ ಜಯಂತಿ ಆಯಾ ವರ್ಗದ ಸಮಾಜಕ್ಕೆ ಸೀಮಿತವಾಗುತ್ತಿರುವುದು ಸರಿಯಲ್ಲ. ಇಂತಹ ಜಯಂತಿಗಳಿಗೆ ಎಲ್ಲ ಸಮುದಾಯದವರು ಪಾಲ್ಗೊಳ್ಳಬೇಕು. ಆಧುನಿಕ ವ್ಯವಸ್ಥೆಯಲ್ಲಿ ಸವಿತಾ ಸಮಾಜದವರ ಕಾಯಕದ ಸ್ವರೂಪವೂ ಬದಲಾಗಿದೆ. ಸವಿತಾ ಸಮುದಾಯವಷ್ಟೇ ಅಲ್ಲದೆ ಬೇರೆ ಸಮಾಜದವರೂ ಈ ಕಾಯಕ ಮಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ‘ಸವಿತಾ ಸಮಾಜ ಕ್ಷೌರಿಕ ವೃತ್ತಿ ಪರಂಪರೆ ಉಳಿಸಿಕೊಂಡಿದೆ. ಉದ್ಯೋಗವಾಗಿ ಇದನ್ನು ಸ್ವೀಕರಿಸಲಾಗಿದೆ. ಆಧುನಿಕ ಜಗತ್ತಿಗೆ ತಕ್ಕಂತೆ ಅವರ ಕಾಯಕ ಶೈಲಿಯೂ ಬದಲಾಗುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಮತ್ತು ಶಿಕ್ಷಣವನ್ನು ಪಡೆಯುವಲ್ಲಿ ಈ ಸಮಾಜ ಮುಂಚೂಣಿಯಲ್ಲಿದೆ’ ಎಂದರು.</p>.<p>ತಿಪ್ಪೇಸ್ವಾಮಿ ಸಂಪಿಗೆ ವಿಶೇಷ ಉಪನ್ಯಾಸ ನೀಡಿ, ‘ಸವಿತ ಸಮಾಜದ ಬಗ್ಗೆ ವೇದಗಳಲ್ಲಿ ಉಲ್ಲೇಖಗಳಿವೆ. ಕೆಲವು ಸಲ ಅವಮಾನಗಳು ಆಗುತ್ತವೆ. ಆದರೆ, ಅವುಗಳನ್ನು ಮೆಟ್ಟಿ ನಿಲ್ಲಬೇಕು. ಆತ್ಮವಿಶ್ವಾಸದಿಂದ ಬದುಕು ಕಟ್ಟಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ್, ಸವಿತಾ ಸಮಾಜದ ಅಧ್ಯಕ್ಷ ಎನ್.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎನ್.ಡಿ. ಕುಮಾರ್, ಮುಖಂಡರಾದ ತಿಪ್ಪೇಸ್ವಾಮಿ, ಆರ್.ಶ್ರೀನಿವಾಸ್, ನಾಗರಾಜ್, ಕವಿತಾ ಶಾಮ್, ಹನುಮಂತಪ್ಪ, ರಾಜು, ರಂಜಿತ್, ಪ್ರಸನ್ನ ಇದ್ದರು.</p>.<p>ಸಮಾರಂಭಕ್ಕೂ ಮುನ್ನ ಸವಿತಾ ಮಹರ್ಷಿಗಳ ಭಾವಚಿತ್ರದ ಅದ್ಧೂರಿ ಮೆರವಣಿಗೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಚಾಲನೆ ನೀಡಲಾಯಿತು. ಗಾಂಧಿವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿದ ಮೆರವಣಿಗೆ ತರಾಸು ರಂಗಮಂದಿರ ತಲುಪಿತು. ಮೆರವಣಿಗೆಯಲ್ಲಿ ಹಲವು ಕಲಾತಂಡಗಳು ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಮನುಕುಲದ ಶ್ರೇಯಸ್ಸಿಗೆ ಕಾಯಕ ತತ್ವಗಳನ್ನು ಒಳಗೊಂಡ ಉತ್ತಮ ಸಂದೇಶ ನೀಡಿದ ಮಹನೀಯರು ಸವಿತಾ ಮಹರ್ಷಿ. ಅವರು ಪ್ರತಿಪಾದಿಸಿದ ತತ್ವ ಎಲ್ಲ ವರ್ಗಗಳಿಗೂ ಅನ್ವಯಿಸುತ್ತದೆ’ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಶನಿವಾರ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>‘ಸವಿತಾ ಮಹರ್ಷಿ ಸಿದ್ಧಾಂತ ಮತ್ತು ಬೋಧನೆ ಬಹಳ ಜನರಿಗೆ ತಿಳಿದಿಲ್ಲ. ಮನುಕುಲದ ಉದ್ಧಾರಕ್ಕಾಗಿ ಅವರು ನೀಡಿರುವ ಸಂದೇಶ ಉತ್ತಮ ಸಮಾಜಕ್ಕೆ ಸ್ಫೂರ್ತಿಯಾಗಿದೆ. ಪ್ರತಿ ಹಳ್ಳಿಯಲ್ಲಿ ಸವಿತಾ ಸಮಾಜ<br />ನೆಲೆಸಿದ್ದು, ಪ್ರತಿಯೊಂದು ಶುಭ ಕಾರ್ಯಗಳಿಗೂ ಈ ಸಮಾಜ ಸೇವೆ ಸಲ್ಲಿಸುತ್ತದೆ’ ಎಂದರು.</p>.<p>‘ಸಾಧಕರ ಜಯಂತಿ ಆಯಾ ವರ್ಗದ ಸಮಾಜಕ್ಕೆ ಸೀಮಿತವಾಗುತ್ತಿರುವುದು ಸರಿಯಲ್ಲ. ಇಂತಹ ಜಯಂತಿಗಳಿಗೆ ಎಲ್ಲ ಸಮುದಾಯದವರು ಪಾಲ್ಗೊಳ್ಳಬೇಕು. ಆಧುನಿಕ ವ್ಯವಸ್ಥೆಯಲ್ಲಿ ಸವಿತಾ ಸಮಾಜದವರ ಕಾಯಕದ ಸ್ವರೂಪವೂ ಬದಲಾಗಿದೆ. ಸವಿತಾ ಸಮುದಾಯವಷ್ಟೇ ಅಲ್ಲದೆ ಬೇರೆ ಸಮಾಜದವರೂ ಈ ಕಾಯಕ ಮಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ‘ಸವಿತಾ ಸಮಾಜ ಕ್ಷೌರಿಕ ವೃತ್ತಿ ಪರಂಪರೆ ಉಳಿಸಿಕೊಂಡಿದೆ. ಉದ್ಯೋಗವಾಗಿ ಇದನ್ನು ಸ್ವೀಕರಿಸಲಾಗಿದೆ. ಆಧುನಿಕ ಜಗತ್ತಿಗೆ ತಕ್ಕಂತೆ ಅವರ ಕಾಯಕ ಶೈಲಿಯೂ ಬದಲಾಗುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಮತ್ತು ಶಿಕ್ಷಣವನ್ನು ಪಡೆಯುವಲ್ಲಿ ಈ ಸಮಾಜ ಮುಂಚೂಣಿಯಲ್ಲಿದೆ’ ಎಂದರು.</p>.<p>ತಿಪ್ಪೇಸ್ವಾಮಿ ಸಂಪಿಗೆ ವಿಶೇಷ ಉಪನ್ಯಾಸ ನೀಡಿ, ‘ಸವಿತ ಸಮಾಜದ ಬಗ್ಗೆ ವೇದಗಳಲ್ಲಿ ಉಲ್ಲೇಖಗಳಿವೆ. ಕೆಲವು ಸಲ ಅವಮಾನಗಳು ಆಗುತ್ತವೆ. ಆದರೆ, ಅವುಗಳನ್ನು ಮೆಟ್ಟಿ ನಿಲ್ಲಬೇಕು. ಆತ್ಮವಿಶ್ವಾಸದಿಂದ ಬದುಕು ಕಟ್ಟಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ್, ಸವಿತಾ ಸಮಾಜದ ಅಧ್ಯಕ್ಷ ಎನ್.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎನ್.ಡಿ. ಕುಮಾರ್, ಮುಖಂಡರಾದ ತಿಪ್ಪೇಸ್ವಾಮಿ, ಆರ್.ಶ್ರೀನಿವಾಸ್, ನಾಗರಾಜ್, ಕವಿತಾ ಶಾಮ್, ಹನುಮಂತಪ್ಪ, ರಾಜು, ರಂಜಿತ್, ಪ್ರಸನ್ನ ಇದ್ದರು.</p>.<p>ಸಮಾರಂಭಕ್ಕೂ ಮುನ್ನ ಸವಿತಾ ಮಹರ್ಷಿಗಳ ಭಾವಚಿತ್ರದ ಅದ್ಧೂರಿ ಮೆರವಣಿಗೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಚಾಲನೆ ನೀಡಲಾಯಿತು. ಗಾಂಧಿವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿದ ಮೆರವಣಿಗೆ ತರಾಸು ರಂಗಮಂದಿರ ತಲುಪಿತು. ಮೆರವಣಿಗೆಯಲ್ಲಿ ಹಲವು ಕಲಾತಂಡಗಳು ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>