<p><strong>ಚಿತ್ರದುರ್ಗ:</strong> ‘ಒಳ ಮೀಸಲಾತಿಗಾಗಿ ನಾವು 30 ವರ್ಷ ಹೋರಾಟ ಮಾಡಿದವರು. ನಿಮ್ಮ ಲಾಠಿಗೆ ಹೆದರುವುದಿಲ್ಲ’ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದರು.</p><p>ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆಯಿಂದ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮಾದಿಗ ವಕೀಲರ ರಾಜ್ಯಮಟ್ಟದ ಮೊದಲ ಸಮಾವೇಶದ ಸಾನಿಧ್ಯ ವಹಿಸಿ ಮಾತನಾಡಿದರು.</p><p>‘ಸುಪ್ರೀಂ ಕೋರ್ಟ್ ಆದೇಶದಂತೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಬೇಕು. ನಾವು ನಮ್ಮ ಹಕ್ಕು ಕೇಳುತ್ತಿದ್ದೇವೆ. ಸಂವಿಧಾನ ಬದ್ಧವಾಗಿರುವ ಈ ಹಕ್ಕನ್ನು ನ್ಯಾಯಯುತ ಹೋರಾಟದ ಮೂಲಕ ಪಡೆಯುವುದಂತೂ ನೂರಕ್ಕೆ ನೂರರಷ್ಟು ಸತ್ಯ. ಕೊಟ್ಟ ಮಾತಿನಂತೆ ನಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳುತ್ತಿದ್ದೇವೆ. ಅವರ ನಡೆ ಅನುಮಾನ ಮೂಡಿಸುತ್ತಿದೆ’ ಎಂದು ತಿಳಿಸಿದರು.</p><p>‘ಒಳಮೀಸಲಾತಿ ಬಗ್ಗೆ ನಮ್ಮ ಸಮುದಾಯದ ನಾಯಕರು ಸದನದಲ್ಲಿ ಮಾತನಾಡುತ್ತಿಲ್ಲ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದನ್ನು ಬಿಟ್ಟು ಸದನದಲ್ಲೇ ಈ ವಿಚಾರವಾಗಿ ಗಟ್ಟಿ ಧ್ವನಿ ಎತ್ತಬೇಕು. ಸಂವಿಧಾನ ಬದ್ಧ ಹಕ್ಕನ್ನು ನೀಡುವುದಾಗಿ ಮುಖ್ಯಮಂತ್ರಿ ಹಾಗೂ ಸಚಿವರು ಹೇಳಿದರೆ ಸಾಕು. ನಾವು ಮತ್ತೇನನ್ನೂ ಕೇಳುವುದಿಲ್ಲ’ ಎಂದರು. </p><p>ಮಾಜಿ ಸಚಿವ ಎ.ನಾರಾಯಣ ಸ್ವಾಮಿ, ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ವೇದಿಕೆ ಅಧ್ಯಕ್ಷ ಎಸ್.ಅರುಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಒಳ ಮೀಸಲಾತಿಗಾಗಿ ನಾವು 30 ವರ್ಷ ಹೋರಾಟ ಮಾಡಿದವರು. ನಿಮ್ಮ ಲಾಠಿಗೆ ಹೆದರುವುದಿಲ್ಲ’ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದರು.</p><p>ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆಯಿಂದ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮಾದಿಗ ವಕೀಲರ ರಾಜ್ಯಮಟ್ಟದ ಮೊದಲ ಸಮಾವೇಶದ ಸಾನಿಧ್ಯ ವಹಿಸಿ ಮಾತನಾಡಿದರು.</p><p>‘ಸುಪ್ರೀಂ ಕೋರ್ಟ್ ಆದೇಶದಂತೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಬೇಕು. ನಾವು ನಮ್ಮ ಹಕ್ಕು ಕೇಳುತ್ತಿದ್ದೇವೆ. ಸಂವಿಧಾನ ಬದ್ಧವಾಗಿರುವ ಈ ಹಕ್ಕನ್ನು ನ್ಯಾಯಯುತ ಹೋರಾಟದ ಮೂಲಕ ಪಡೆಯುವುದಂತೂ ನೂರಕ್ಕೆ ನೂರರಷ್ಟು ಸತ್ಯ. ಕೊಟ್ಟ ಮಾತಿನಂತೆ ನಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳುತ್ತಿದ್ದೇವೆ. ಅವರ ನಡೆ ಅನುಮಾನ ಮೂಡಿಸುತ್ತಿದೆ’ ಎಂದು ತಿಳಿಸಿದರು.</p><p>‘ಒಳಮೀಸಲಾತಿ ಬಗ್ಗೆ ನಮ್ಮ ಸಮುದಾಯದ ನಾಯಕರು ಸದನದಲ್ಲಿ ಮಾತನಾಡುತ್ತಿಲ್ಲ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದನ್ನು ಬಿಟ್ಟು ಸದನದಲ್ಲೇ ಈ ವಿಚಾರವಾಗಿ ಗಟ್ಟಿ ಧ್ವನಿ ಎತ್ತಬೇಕು. ಸಂವಿಧಾನ ಬದ್ಧ ಹಕ್ಕನ್ನು ನೀಡುವುದಾಗಿ ಮುಖ್ಯಮಂತ್ರಿ ಹಾಗೂ ಸಚಿವರು ಹೇಳಿದರೆ ಸಾಕು. ನಾವು ಮತ್ತೇನನ್ನೂ ಕೇಳುವುದಿಲ್ಲ’ ಎಂದರು. </p><p>ಮಾಜಿ ಸಚಿವ ಎ.ನಾರಾಯಣ ಸ್ವಾಮಿ, ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ವೇದಿಕೆ ಅಧ್ಯಕ್ಷ ಎಸ್.ಅರುಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>