<p><strong>ನಾಯಕನಹಟ್ಟಿ: </strong>ರಷ್ಯಾದಲ್ಲಿ ವರ್ಷಾಂತ್ಯಕ್ಕೆ ನಡೆಯುವ ಅಂತರರಾಷ್ಟ್ರೀಯ ಜೂನಿಯರ್ ವಿಜ್ಞಾನ ಒಲಿಂಪಿಯಾಡ್ ಸ್ಪರ್ಧೆಗೆ ಭಾರತದಿಂದ 6 ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಕುದಾಪುರದ ಐಐಎಸ್ಸಿ ಪ್ರತಿಭಾನ್ವೇಷಣೆ ಅಭಿವೃದ್ಧಿ ಕೇಂದ್ರಕ್ಕೆ ದೊರೆತಿದೆ ಎಂದು ಸಂಸ್ಥೆಯ ಮುಖ್ಯಸ್ಥ ಸುಬ್ಬಾರೆಡ್ಡಿ ತಿಳಿಸಿದರು.</p>.<p>ಸಮೀಪದ ಕುದಾಪುರ ಐಐಎಸ್ಸಿ ಆವರಣದಲ್ಲಿರುವ ಕೌಶಲಾಭಿವೃದ್ಧಿ ಮತ್ತು ಪ್ರತಿಭಾನ್ವೇಷಣೆ ತರಬೇತಿ ಕೇಂದ್ರದಲ್ಲಿ ಬುಧವಾರ ಆರಂಭಗೊಂಡ 15 ದಿನಗಳ ಅಂತರರಾಷ್ಟ್ರೀಯ ಮಟ್ಟದ ವಿಜ್ಞಾನ ಒಲಿಂಪಿಯಾಡ್ ಸ್ಪರ್ಧೆ ಆಯ್ಕೆ ಮತ್ತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.<br><br> ಅಂತರರಾಷ್ಟ್ರೀಯ ಜೂನಿಯರ್ ವಿಜ್ಞಾನ ಒಲಿಂಪಿಯಾಡ್ ಸ್ಪರ್ಧೆ ಅತ್ಯಂತ ಪ್ರತಿಷ್ಠಿತ ಸಮಾವೇಶ. ಈ ಸಮಾವೇಶಕ್ಕೆ ವಿಶ್ವದ 60ಕ್ಕೂ ಹೆಚ್ಚು ರಾಷ್ಟ್ರಗಳಿಂದ ನೂರಾರು ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ನಮ್ಮ ದೇಶದಿಂದ 2023ರಿಂದ ಈ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಮತ್ತು ತರಬೇತಿ ನೀಡುವ ಹೊಣೆಗಾರಿಕೆಯನ್ನು ಮುಂಬೈನ ಹೋಮಿ ಬಾಬಾ ಸೆಂಟರ್ ಫಾರ್ ಸೈನ್ಸ್ ಎಜುಕೇಷನ್ ಸಹಯೋಗದಲ್ಲಿ ಭಾರತೀಯ ಭೌತವಿಜ್ಞಾನ ಶಿಕ್ಷಕರ ವೇದಿಕೆ ವಹಿಸಿಕೊಂಡಿದೆ ಎಂದು ತಿಳಿಸಿದರು.</p>.<p>ಸ್ಪರ್ಧೆಗಾಗಿ ವಿದ್ಯಾರ್ಥಿಗಳ ಆಯ್ಕೆಗೆ ನ್ಯಾಷನಲ್ ಸ್ಟ್ಯಾಂಡರ್ಡ್ ಎಕ್ಸಾಮಿನೇಷನ್ ಇನ್ ಜೂನಿಯರ್ ಸೈನ್ಸ್ ಸಂಸ್ಥೆಯು 2024ರ ನವೆಂಬರ್ನಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಯೋಜಿಸಿತ್ತು. ಈ ಪರೀಕ್ಷೆಯಲ್ಲಿ 50 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆ ಪರೀಕ್ಷೆಯಲ್ಲಿ 500 ವಿದ್ಯಾರ್ಥಿಗಳನ್ನು ಮಾತ್ರ ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗಿತ್ತು. ಫೆಬ್ರುವರಿಯಲ್ಲಿ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಿ 500 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳನ್ನು ಇನ್ನೊಂದು ಸುತ್ತಿಗೆ ಆಯ್ಕೆ ಮಾಡಲಾಗಿತ್ತು ಎಂದು ಮಾಹಿತಿ ನೀಡಿದರು.</p>.<p>‘36 ವಿದ್ಯಾರ್ಥಿಗಳಿಗೆ ಅಂತಿಮ ಹಂತದ ಸಿದ್ಧತೆ ಮತ್ತು ತರಬೇತಿಯನ್ನು ಕ್ಯಾಂಪಸ್ನಲ್ಲಿ ನೀಡಲಾಗುವುದು. 15 ದಿನಗಳವರೆಗೂ ಎಲ್ಲ ವಿದ್ಯಾರ್ಥಿಗಳಿಗೆ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಬೇತಿ ನೀಡಲಾಗುವುದು. ಈ 36 ವಿದ್ಯಾರ್ಥಿಗಳಲ್ಲಿ ಅಂತಿಮವಾಗಿ 6 ವಿದ್ಯಾರ್ಥಿಗಳನ್ನು ಮಾತ್ರ ಒಲಿಂಪಿಯಾಡ್ಗೆ ಆಯ್ಕೆ ಮಾಡಲಾಗುವುದ’ ಎಂದು ವಿವರಿಸಿದರು.</p>.<p>ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವ ಈ ಕಾರ್ಯಕ್ರಮಕ್ಕೆ ಐಐಎಸ್ಸಿ ಆತಿಥ್ಯ ವಹಿಸಿದೆ. ಅದಕ್ಕಾಗಿ ಇಲ್ಲಿನ ಸುಸಜ್ಜಿತ ಪ್ರಯೋಗಾಲಯ ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಕರ್ನಾಟಕದಿಂದಲೂ ಹೆಚ್ಚಿನ ವಿದ್ಯಾರ್ಥಿಗಳು ಇಂತಹ ವಿಶ್ವ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಶಿಕ್ಷಕರು ಮತ್ತು ಪಾಲಕರು ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.</p>.<p>ಭಾರತೀಯ ಭೌತವಿಜ್ಞಾನ ಶಿಕ್ಷಕರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪ್ರೊ.ರೇಖಾ ಗೋರ್ಪಡೆ, ಸಂಚಾಲಕರಾದ ಬಿ.ಎಸ್. ಅಚ್ಯುತ, ಎಂ.ಕೆ.ರಾಘವೇಂದ್ರ, ಪ್ರೊ.ವಿನಾಯಕ ಕಟ್ದಾರೆ, ಎಸ್.ರೇಖಾ, ಪ್ರೊ.ಅರವಿಂದ, ಪ್ರೊ. ಶ್ರೀನಾಥ್, ಎಂಜಿನಿಯರ್ ಹೇಮಂತ್ ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ: </strong>ರಷ್ಯಾದಲ್ಲಿ ವರ್ಷಾಂತ್ಯಕ್ಕೆ ನಡೆಯುವ ಅಂತರರಾಷ್ಟ್ರೀಯ ಜೂನಿಯರ್ ವಿಜ್ಞಾನ ಒಲಿಂಪಿಯಾಡ್ ಸ್ಪರ್ಧೆಗೆ ಭಾರತದಿಂದ 6 ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಕುದಾಪುರದ ಐಐಎಸ್ಸಿ ಪ್ರತಿಭಾನ್ವೇಷಣೆ ಅಭಿವೃದ್ಧಿ ಕೇಂದ್ರಕ್ಕೆ ದೊರೆತಿದೆ ಎಂದು ಸಂಸ್ಥೆಯ ಮುಖ್ಯಸ್ಥ ಸುಬ್ಬಾರೆಡ್ಡಿ ತಿಳಿಸಿದರು.</p>.<p>ಸಮೀಪದ ಕುದಾಪುರ ಐಐಎಸ್ಸಿ ಆವರಣದಲ್ಲಿರುವ ಕೌಶಲಾಭಿವೃದ್ಧಿ ಮತ್ತು ಪ್ರತಿಭಾನ್ವೇಷಣೆ ತರಬೇತಿ ಕೇಂದ್ರದಲ್ಲಿ ಬುಧವಾರ ಆರಂಭಗೊಂಡ 15 ದಿನಗಳ ಅಂತರರಾಷ್ಟ್ರೀಯ ಮಟ್ಟದ ವಿಜ್ಞಾನ ಒಲಿಂಪಿಯಾಡ್ ಸ್ಪರ್ಧೆ ಆಯ್ಕೆ ಮತ್ತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.<br><br> ಅಂತರರಾಷ್ಟ್ರೀಯ ಜೂನಿಯರ್ ವಿಜ್ಞಾನ ಒಲಿಂಪಿಯಾಡ್ ಸ್ಪರ್ಧೆ ಅತ್ಯಂತ ಪ್ರತಿಷ್ಠಿತ ಸಮಾವೇಶ. ಈ ಸಮಾವೇಶಕ್ಕೆ ವಿಶ್ವದ 60ಕ್ಕೂ ಹೆಚ್ಚು ರಾಷ್ಟ್ರಗಳಿಂದ ನೂರಾರು ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ನಮ್ಮ ದೇಶದಿಂದ 2023ರಿಂದ ಈ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಮತ್ತು ತರಬೇತಿ ನೀಡುವ ಹೊಣೆಗಾರಿಕೆಯನ್ನು ಮುಂಬೈನ ಹೋಮಿ ಬಾಬಾ ಸೆಂಟರ್ ಫಾರ್ ಸೈನ್ಸ್ ಎಜುಕೇಷನ್ ಸಹಯೋಗದಲ್ಲಿ ಭಾರತೀಯ ಭೌತವಿಜ್ಞಾನ ಶಿಕ್ಷಕರ ವೇದಿಕೆ ವಹಿಸಿಕೊಂಡಿದೆ ಎಂದು ತಿಳಿಸಿದರು.</p>.<p>ಸ್ಪರ್ಧೆಗಾಗಿ ವಿದ್ಯಾರ್ಥಿಗಳ ಆಯ್ಕೆಗೆ ನ್ಯಾಷನಲ್ ಸ್ಟ್ಯಾಂಡರ್ಡ್ ಎಕ್ಸಾಮಿನೇಷನ್ ಇನ್ ಜೂನಿಯರ್ ಸೈನ್ಸ್ ಸಂಸ್ಥೆಯು 2024ರ ನವೆಂಬರ್ನಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಯೋಜಿಸಿತ್ತು. ಈ ಪರೀಕ್ಷೆಯಲ್ಲಿ 50 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆ ಪರೀಕ್ಷೆಯಲ್ಲಿ 500 ವಿದ್ಯಾರ್ಥಿಗಳನ್ನು ಮಾತ್ರ ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗಿತ್ತು. ಫೆಬ್ರುವರಿಯಲ್ಲಿ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಿ 500 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳನ್ನು ಇನ್ನೊಂದು ಸುತ್ತಿಗೆ ಆಯ್ಕೆ ಮಾಡಲಾಗಿತ್ತು ಎಂದು ಮಾಹಿತಿ ನೀಡಿದರು.</p>.<p>‘36 ವಿದ್ಯಾರ್ಥಿಗಳಿಗೆ ಅಂತಿಮ ಹಂತದ ಸಿದ್ಧತೆ ಮತ್ತು ತರಬೇತಿಯನ್ನು ಕ್ಯಾಂಪಸ್ನಲ್ಲಿ ನೀಡಲಾಗುವುದು. 15 ದಿನಗಳವರೆಗೂ ಎಲ್ಲ ವಿದ್ಯಾರ್ಥಿಗಳಿಗೆ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಬೇತಿ ನೀಡಲಾಗುವುದು. ಈ 36 ವಿದ್ಯಾರ್ಥಿಗಳಲ್ಲಿ ಅಂತಿಮವಾಗಿ 6 ವಿದ್ಯಾರ್ಥಿಗಳನ್ನು ಮಾತ್ರ ಒಲಿಂಪಿಯಾಡ್ಗೆ ಆಯ್ಕೆ ಮಾಡಲಾಗುವುದ’ ಎಂದು ವಿವರಿಸಿದರು.</p>.<p>ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವ ಈ ಕಾರ್ಯಕ್ರಮಕ್ಕೆ ಐಐಎಸ್ಸಿ ಆತಿಥ್ಯ ವಹಿಸಿದೆ. ಅದಕ್ಕಾಗಿ ಇಲ್ಲಿನ ಸುಸಜ್ಜಿತ ಪ್ರಯೋಗಾಲಯ ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಕರ್ನಾಟಕದಿಂದಲೂ ಹೆಚ್ಚಿನ ವಿದ್ಯಾರ್ಥಿಗಳು ಇಂತಹ ವಿಶ್ವ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಶಿಕ್ಷಕರು ಮತ್ತು ಪಾಲಕರು ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.</p>.<p>ಭಾರತೀಯ ಭೌತವಿಜ್ಞಾನ ಶಿಕ್ಷಕರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪ್ರೊ.ರೇಖಾ ಗೋರ್ಪಡೆ, ಸಂಚಾಲಕರಾದ ಬಿ.ಎಸ್. ಅಚ್ಯುತ, ಎಂ.ಕೆ.ರಾಘವೇಂದ್ರ, ಪ್ರೊ.ವಿನಾಯಕ ಕಟ್ದಾರೆ, ಎಸ್.ರೇಖಾ, ಪ್ರೊ.ಅರವಿಂದ, ಪ್ರೊ. ಶ್ರೀನಾಥ್, ಎಂಜಿನಿಯರ್ ಹೇಮಂತ್ ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>