<p><strong>ಚಿತ್ರದುರ್ಗ: </strong>ಕೊರೊನಾ ಸೋಂಕು ಕಾಣಿಸಿಕೊಂಡು ಸಂಕಷ್ಟಕ್ಕೆ ಸಿಲುಕಿರುವ ವಿಶ್ವಕರ್ಮ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೋರಲಾಗಿದೆ ಎಂದು ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡಗಿ, ಕಮ್ಮಾರ, ಅಕ್ಕಸಾಲಿಗರು, ಲೋಹದ ಕೆಲಸ, ಶಿಲ್ಪಕಲೆ ಕೆತ್ತನೆ ಮಾಡುವವರು ಕೋವಿಡ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲಸ ಇಲ್ಲದೇ ಜೀವನ ನಿರ್ವಹಣೆಗೆ ಕಷ್ಟಪಡುತ್ತಿದ್ದಾರೆ. ತುಂಬಾ ಸಂಕಷ್ಟದಲ್ಲಿರುವ ಸಮುದಾಯಕ್ಕೆ ಸರ್ಕಾರ ನೆರವಾಗುವ ವಿಶ್ವಾಸವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ನಿಗಮದ ಚಟುವಟಿಕೆಗಳಿಗೆ ₹ 100 ಕೋಟಿ ನೀಡುವಂತೆ ಬಜೆಟ್ ಪೂರ್ವದಲ್ಲಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ಕೋವಿಡ್ನಿಂದಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ನಿಗಮಕ್ಕೆ ₹ 10 ಕೋಟಿ ಮಾತ್ರ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಹೆಚ್ಚುವರಿಯಾಗಿ ₹ 1,000 ಕೋಟಿ ಅನುದಾನ ನೀಡಲಾಗಿದೆ. ಇದರಲ್ಲಿ ನಿಗಮಕ್ಕೆ ₹ 20 ಕೋಟಿ ಸಿಗುವ ಸಾಧ್ಯತೆ ಇದೆ’ ಎಂದು ಹೇಳಿದರು.</p>.<p>‘ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಶಿವಾರ ಪಟ್ಟಣದಲ್ಲಿ ₹ 10ಕೋಟಿ ವೆಚ್ಚದಲ್ಲಿ ಶಿಲ್ಪಕಲಾ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಅನುದಾನ ನಿಗಮಕ್ಕೆ ಬಿಡುಗಡೆ ಮಾಡಿದ್ದು, ಕ್ರಿಯಾಯೋಜನೆಯು ಸಿದ್ಧವಾಗಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಶಿಲ್ಪಕಲಾ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ’ ಎಂದರು.</p>.<p>ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಾಚಾರಿ, ನಗರಸಭೆ ನಾಮನಿರ್ದೇಶನ ಸದಸ್ಯ ರಮೇಶಾಚಾರಿ, ನಿಗಮದ ಜಿಲ್ಲಾ ವ್ಯವಸ್ಥಾಪಕ ಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಕೊರೊನಾ ಸೋಂಕು ಕಾಣಿಸಿಕೊಂಡು ಸಂಕಷ್ಟಕ್ಕೆ ಸಿಲುಕಿರುವ ವಿಶ್ವಕರ್ಮ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೋರಲಾಗಿದೆ ಎಂದು ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡಗಿ, ಕಮ್ಮಾರ, ಅಕ್ಕಸಾಲಿಗರು, ಲೋಹದ ಕೆಲಸ, ಶಿಲ್ಪಕಲೆ ಕೆತ್ತನೆ ಮಾಡುವವರು ಕೋವಿಡ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲಸ ಇಲ್ಲದೇ ಜೀವನ ನಿರ್ವಹಣೆಗೆ ಕಷ್ಟಪಡುತ್ತಿದ್ದಾರೆ. ತುಂಬಾ ಸಂಕಷ್ಟದಲ್ಲಿರುವ ಸಮುದಾಯಕ್ಕೆ ಸರ್ಕಾರ ನೆರವಾಗುವ ವಿಶ್ವಾಸವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ನಿಗಮದ ಚಟುವಟಿಕೆಗಳಿಗೆ ₹ 100 ಕೋಟಿ ನೀಡುವಂತೆ ಬಜೆಟ್ ಪೂರ್ವದಲ್ಲಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ಕೋವಿಡ್ನಿಂದಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ನಿಗಮಕ್ಕೆ ₹ 10 ಕೋಟಿ ಮಾತ್ರ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಹೆಚ್ಚುವರಿಯಾಗಿ ₹ 1,000 ಕೋಟಿ ಅನುದಾನ ನೀಡಲಾಗಿದೆ. ಇದರಲ್ಲಿ ನಿಗಮಕ್ಕೆ ₹ 20 ಕೋಟಿ ಸಿಗುವ ಸಾಧ್ಯತೆ ಇದೆ’ ಎಂದು ಹೇಳಿದರು.</p>.<p>‘ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಶಿವಾರ ಪಟ್ಟಣದಲ್ಲಿ ₹ 10ಕೋಟಿ ವೆಚ್ಚದಲ್ಲಿ ಶಿಲ್ಪಕಲಾ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಅನುದಾನ ನಿಗಮಕ್ಕೆ ಬಿಡುಗಡೆ ಮಾಡಿದ್ದು, ಕ್ರಿಯಾಯೋಜನೆಯು ಸಿದ್ಧವಾಗಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಶಿಲ್ಪಕಲಾ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ’ ಎಂದರು.</p>.<p>ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಾಚಾರಿ, ನಗರಸಭೆ ನಾಮನಿರ್ದೇಶನ ಸದಸ್ಯ ರಮೇಶಾಚಾರಿ, ನಿಗಮದ ಜಿಲ್ಲಾ ವ್ಯವಸ್ಥಾಪಕ ಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>