<p><strong>ಸಿರಿಗೆರೆ</strong>: ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಚಿತ್ರದುರ್ಗದ ಮಾದಾರ ಚೆನ್ನಯ್ಯ ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳು ತರಳಬಾಳು ಮಠದ ಶಾಂತಿವನಕ್ಕೆ ಶುಕ್ರವಾರ ಭೇಟಿ ನೀಡಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.</p>.<p>ಶಾಂತಿವನಕ್ಕೆ ಈ ಇಬ್ಬರು ಶ್ರೀಗಳು ಭೇಟಿ ನೀಡಿದ್ದು ಇದೇ ಮೊದಲು. ಆದಿಚುಂಚನಗಿರಿ ಮಠದ ಹಿರಿಯ ಗುರುಗಳಾಗಿದ್ದ ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಧ್ಯೆ ನಿಕಟ ಸಂಕರ್ಪ ಇತ್ತು. ಅವರು ಹಲವು ಬಾರಿ ತರಳಬಾಳು ಮಠಕ್ಕೆ ಭೇಟಿ ನೀಡಿದ್ದರು. </p>.<p>ಚಿತ್ರದುರ್ಗದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಹಲವು ಬಾರಿ ಸಿರಿಗೆರೆ ಮತ್ತು ಮಠದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ ಶಾಂತಿವನಕ್ಕೆ ಭೇಟಿ ನೀಡಿದ್ದು ಇದೇ ಮೊದಲು. </p>.<p>ಈ ಸಂದರ್ಭದಲ್ಲಿ ತರಳಬಾಳು ಶ್ರೀಗಳು ನಿರ್ಮಿಸಿರುವ ಕಿರು ಜಲಾಶಯದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗಿ ಈ ಭಾಗದ ಕೃಷಿಕರಿಗೆ ನೆರವಾಗುತ್ತಿರುವುದನ್ನು ಸ್ವಾಮೀಜಿಗಳು ಮುಕ್ತಕಂಠದಿಂದ ಪ್ರಶಂಸಿಸಿದರು. ಜಲಾಶಯದ ಮೇಲ್ಸೇತುವೆಯಲ್ಲಿ ಒಟ್ಟಿಗೆ ಕುಳಿತು ಮಾತುಕತೆ ನಡೆಸಿದರು. ಕೆಲಹೊತ್ತು ಕೃಷಿ ಚಟುವಟಿಕೆಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಶಾಂತಿವನದ ಪ್ರಾಕೃತಿಕ ಸೊಬಗಿಗೆ ಮಾರುಹೋದರು. </p>.<p>ಭೇಟಿಯ ನಂತರ ತರಳಬಾಳು ಶ್ರೀಗಳು ಹಾಗೂ ನಿರ್ಮಲಾನಂದನಾಥ ಶ್ರೀಗಳು ಒಂದೇ ಕಾರಿನಲ್ಲಿ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಚಿತ್ರದುರ್ಗದ ಮಾದಾರ ಚೆನ್ನಯ್ಯ ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳು ತರಳಬಾಳು ಮಠದ ಶಾಂತಿವನಕ್ಕೆ ಶುಕ್ರವಾರ ಭೇಟಿ ನೀಡಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.</p>.<p>ಶಾಂತಿವನಕ್ಕೆ ಈ ಇಬ್ಬರು ಶ್ರೀಗಳು ಭೇಟಿ ನೀಡಿದ್ದು ಇದೇ ಮೊದಲು. ಆದಿಚುಂಚನಗಿರಿ ಮಠದ ಹಿರಿಯ ಗುರುಗಳಾಗಿದ್ದ ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಧ್ಯೆ ನಿಕಟ ಸಂಕರ್ಪ ಇತ್ತು. ಅವರು ಹಲವು ಬಾರಿ ತರಳಬಾಳು ಮಠಕ್ಕೆ ಭೇಟಿ ನೀಡಿದ್ದರು. </p>.<p>ಚಿತ್ರದುರ್ಗದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಹಲವು ಬಾರಿ ಸಿರಿಗೆರೆ ಮತ್ತು ಮಠದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ ಶಾಂತಿವನಕ್ಕೆ ಭೇಟಿ ನೀಡಿದ್ದು ಇದೇ ಮೊದಲು. </p>.<p>ಈ ಸಂದರ್ಭದಲ್ಲಿ ತರಳಬಾಳು ಶ್ರೀಗಳು ನಿರ್ಮಿಸಿರುವ ಕಿರು ಜಲಾಶಯದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗಿ ಈ ಭಾಗದ ಕೃಷಿಕರಿಗೆ ನೆರವಾಗುತ್ತಿರುವುದನ್ನು ಸ್ವಾಮೀಜಿಗಳು ಮುಕ್ತಕಂಠದಿಂದ ಪ್ರಶಂಸಿಸಿದರು. ಜಲಾಶಯದ ಮೇಲ್ಸೇತುವೆಯಲ್ಲಿ ಒಟ್ಟಿಗೆ ಕುಳಿತು ಮಾತುಕತೆ ನಡೆಸಿದರು. ಕೆಲಹೊತ್ತು ಕೃಷಿ ಚಟುವಟಿಕೆಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಶಾಂತಿವನದ ಪ್ರಾಕೃತಿಕ ಸೊಬಗಿಗೆ ಮಾರುಹೋದರು. </p>.<p>ಭೇಟಿಯ ನಂತರ ತರಳಬಾಳು ಶ್ರೀಗಳು ಹಾಗೂ ನಿರ್ಮಲಾನಂದನಾಥ ಶ್ರೀಗಳು ಒಂದೇ ಕಾರಿನಲ್ಲಿ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>