ಶಿಬಿರದಲ್ಲಿ 3,158 ಮಂದಿ ತಪಾಸಣೆಗೆ ಒಳಪಟ್ಟಿದ್ದು, 221 ಜನರಿಗೆ ಆಯುಷ್ಮಾನ್ ಕಾರ್ಡ್ಗಳನ್ನು ವಿತರಿಸಲಾಯಿತು. 65 ರೋಗಿಗಳಿಗೆ ಟೆಲಿ ಚಿಕಿತ್ಸೆ ನೀಡಲಾಗಿದ್ದು, 34 ಮಂದಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಗುರುತಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಕುಮಾರ್ ಹೇಳಿದರು. ತಹಶೀಲ್ದಾರ್ ಸುರೇಶ್ ಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಕೆ.ಇ. ಜಾನಕೀರಾಮ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಮಂಡಲಾಧ್ಯಕ್ಷ ಡಾ.ಪಿ.ಎಂ. ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮೇಶ್ವರಪ್ಪ, ಆಡಳಿತ ವೈದ್ಯಾಧಿಕಾರಿ ಡಾ.ಅಭಿನವ್ಇದ್ದರು.