<p><strong>ಮೊಳಕಾಲ್ಮುರು:</strong> ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸು ಮಾಡುವುದು ಸೇವಾ ಯೋಜನಾ ಶಿಬಿರಗಳ ಮೂಲ ಗುರಿಯಾಗಲಿ ಎಂದು ರಾಜ್ಯ ದ್ರಾಕ್ಷಾರಸ ಹಾಗೂ ವೈನ್ ಬೋರ್ಡ್ ಅಧ್ಯಕ್ಷ ಬಿ. ಯೋಗೇಶ್ಬಾಬು ತಿಳಿಸಿದರು.</p>.<p>ತಾಲ್ಲೂಕಿನ ಸಿದ್ದಯ್ಯನಕೋಟೆಯಲ್ಲಿ ಸರ್ಕಾರಿ ಪದವಿ ಕಾಲೇಜು ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಸಮಾರೋಪ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮಗಳ ರಸ್ತೆ, ಚರಂಡಿ, ಆವರಣಗಳನ್ನು ಸ್ವಚ್ಛ ಮಾಡುವ ಜತೆಗೆ ಜನರಲ್ಲಿರುವ ಮೂಢನಂಬಿಕೆಗಳನ್ನು ಹೋಗಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಸೂಕ್ತ. ಆಗ ಶಿಬಿರಕ್ಕೆ ಮಹತ್ವ ಬರುತ್ತದೆ. ಯೋಜನಾಧಿಕಾರಿಗಳು ಈ ಬಗ್ಗೆ ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ವಿಜಯ ಮಹಾಂತೇಶ್ವರ ಮಠದ ಬಸವಲಿಂಗ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಪ್ರಾಂಶುಪಾಲ ಡಿ.ಸೂರಯ್ಯ, ಮಠದ ಕಾರ್ಯದರ್ಶಿ ಪಿ.ಆರ್.ಕಾಂತರಾಜ್, ಯೋಜನಾಧಿಕಾರಿ ಲಿಂಗೇಶ್ವರ್, ಸಂಗೀತ ಶಿಕ್ಷಕ ಕೆ.ಒ.ಶಿವಣ್ಣ, ಸಿಬ್ಬಂದಿ ಪಾಪಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸು ಮಾಡುವುದು ಸೇವಾ ಯೋಜನಾ ಶಿಬಿರಗಳ ಮೂಲ ಗುರಿಯಾಗಲಿ ಎಂದು ರಾಜ್ಯ ದ್ರಾಕ್ಷಾರಸ ಹಾಗೂ ವೈನ್ ಬೋರ್ಡ್ ಅಧ್ಯಕ್ಷ ಬಿ. ಯೋಗೇಶ್ಬಾಬು ತಿಳಿಸಿದರು.</p>.<p>ತಾಲ್ಲೂಕಿನ ಸಿದ್ದಯ್ಯನಕೋಟೆಯಲ್ಲಿ ಸರ್ಕಾರಿ ಪದವಿ ಕಾಲೇಜು ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಸಮಾರೋಪ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮಗಳ ರಸ್ತೆ, ಚರಂಡಿ, ಆವರಣಗಳನ್ನು ಸ್ವಚ್ಛ ಮಾಡುವ ಜತೆಗೆ ಜನರಲ್ಲಿರುವ ಮೂಢನಂಬಿಕೆಗಳನ್ನು ಹೋಗಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಸೂಕ್ತ. ಆಗ ಶಿಬಿರಕ್ಕೆ ಮಹತ್ವ ಬರುತ್ತದೆ. ಯೋಜನಾಧಿಕಾರಿಗಳು ಈ ಬಗ್ಗೆ ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ವಿಜಯ ಮಹಾಂತೇಶ್ವರ ಮಠದ ಬಸವಲಿಂಗ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಪ್ರಾಂಶುಪಾಲ ಡಿ.ಸೂರಯ್ಯ, ಮಠದ ಕಾರ್ಯದರ್ಶಿ ಪಿ.ಆರ್.ಕಾಂತರಾಜ್, ಯೋಜನಾಧಿಕಾರಿ ಲಿಂಗೇಶ್ವರ್, ಸಂಗೀತ ಶಿಕ್ಷಕ ಕೆ.ಒ.ಶಿವಣ್ಣ, ಸಿಬ್ಬಂದಿ ಪಾಪಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>