<p><strong>ಚಳ್ಳಕೆರೆ:</strong> ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರುಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಚರಂಡಿ ಕಟ್ಟಿಕೊಂಡು ಗ್ರಾಮದ ಪ್ರಮುಖ ಬೀದಿಯಲ್ಲಿ ಕೊಳಚೆ ನೀರು ಸದಾ ಹರಿಯುತ್ತಿದ್ದು, ನಳದಲ್ಲಿ ಬರುವ ಕೊಳಚೆ ಮಿಶ್ರಿತ ನೀರನ್ನೇ ಕುಡಿಯುವಂತಾಗಿದೆ.</p>.<p>ಕಲುಷಿತ ನೀರು ಕುಡಿಯುವುದರಿಂದ ಜನರಲ್ಲಿ ಸಾಂಕ್ರಾಮಿಕ ರೋಗದ ಆತಂಕ ಎದುರಾಗಿದೆ. ಚರಂಡಿ ಕಟ್ಟಿಕೊಂಡು 2ರಿಂದ 3 ತಿಂಗಳಾಗಿದ್ದು, ಕೊಳಚೆ ನೀರರಿನಿಂದ ದುರ್ವಾಸನೆ ಬೀರುತ್ತಿದೆ. ಈ ನೀರಿನಿಂದ ಹೆಚ್ಚು ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಅವುಗಳಿಂದ ಕಚ್ಚಿಸಿಕೊಂಡು ಗ್ರಾಮಸ್ಥರು ಶೀತ, ಕೆಮ್ಮು, ಜ್ವರ ಹಾಗೂ ನೆಗಡಿಯಿಂದ ನರಳುವಂತಾಗಿದೆ ಎಂದು ಗ್ರಾಮದ ದೇವಿರಮ್ಮ ಜಯಮ್ಮ, ಕರಿಯಮ್ಮ ಆತಂಕ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ತಂದಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ಮುಖಂಡ ರಾಜ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮದ ಚರಂಡಿ ಸ್ವಚ್ಛ ಮಾಡಿಸದಿದ್ದಲ್ಲಿ ತಾಲ್ಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮದ ಸುಜಾತ, ನಾಗಮ್ಮ, ಮಂಜಕ್ಕ, ಲಕ್ಷ್ಮೀ, ಗೌರಮ್ಮ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರುಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಚರಂಡಿ ಕಟ್ಟಿಕೊಂಡು ಗ್ರಾಮದ ಪ್ರಮುಖ ಬೀದಿಯಲ್ಲಿ ಕೊಳಚೆ ನೀರು ಸದಾ ಹರಿಯುತ್ತಿದ್ದು, ನಳದಲ್ಲಿ ಬರುವ ಕೊಳಚೆ ಮಿಶ್ರಿತ ನೀರನ್ನೇ ಕುಡಿಯುವಂತಾಗಿದೆ.</p>.<p>ಕಲುಷಿತ ನೀರು ಕುಡಿಯುವುದರಿಂದ ಜನರಲ್ಲಿ ಸಾಂಕ್ರಾಮಿಕ ರೋಗದ ಆತಂಕ ಎದುರಾಗಿದೆ. ಚರಂಡಿ ಕಟ್ಟಿಕೊಂಡು 2ರಿಂದ 3 ತಿಂಗಳಾಗಿದ್ದು, ಕೊಳಚೆ ನೀರರಿನಿಂದ ದುರ್ವಾಸನೆ ಬೀರುತ್ತಿದೆ. ಈ ನೀರಿನಿಂದ ಹೆಚ್ಚು ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಅವುಗಳಿಂದ ಕಚ್ಚಿಸಿಕೊಂಡು ಗ್ರಾಮಸ್ಥರು ಶೀತ, ಕೆಮ್ಮು, ಜ್ವರ ಹಾಗೂ ನೆಗಡಿಯಿಂದ ನರಳುವಂತಾಗಿದೆ ಎಂದು ಗ್ರಾಮದ ದೇವಿರಮ್ಮ ಜಯಮ್ಮ, ಕರಿಯಮ್ಮ ಆತಂಕ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ತಂದಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ಮುಖಂಡ ರಾಜ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮದ ಚರಂಡಿ ಸ್ವಚ್ಛ ಮಾಡಿಸದಿದ್ದಲ್ಲಿ ತಾಲ್ಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮದ ಸುಜಾತ, ನಾಗಮ್ಮ, ಮಂಜಕ್ಕ, ಲಕ್ಷ್ಮೀ, ಗೌರಮ್ಮ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>