ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ ಪ್ರಕರಣ: ಡಿವೈಎಸ್‌ಪಿ ಕಚೇರಿಯಲ್ಲಿ ಶರಣರ ವಿಚಾರಣೆ

Last Updated 3 ಸೆಪ್ಟೆಂಬರ್ 2022, 7:35 IST
ಅಕ್ಷರ ಗಾತ್ರ

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಡಿವೈಎಸ್‌ಪಿ ಕಚೇರಿಯಲ್ಲಿ ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಶುಕ್ರವಾರ ಸಂಜೆ ಪೊಲೀಸ್ ವಶಕ್ಕೆ ಪಡೆದ ತನಿಖಾ ತಂಡ, ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿ ಡಿವೈಎಸ್‌ಪಿಕಚೇರಿಗೆ ಕರೆತಂದರು. ಮಧ್ಯರಾತ್ರಿಯವರೆಗೂ ಶರಣರನ್ನು ವಿಚಾರಣೆಗೆ ಒಳಪಡಿಸಿದರು. ವಿಚಾರಣೆ ಬಳಿಕ ಶರಣರು ರಾತ್ರಿ ಅಲ್ಲೇ ಮಲಗಿದ್ದರು.

ಶನಿವಾರ ಬೆಳಿಗ್ಗೆ ಮತ್ತೆ ವಿಚಾರಣೆ ಆರಂಭವಾಗಿದೆ. ತನಿಖಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಅವರನ್ನು ಪ್ರಶ್ನಿಸಲಾಗುತ್ತಿದೆ. ವಿಚಾರಣೆಗೆ ಶರಣರು ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಡಿವೈಎಸ್‌ಪಿಕಚೇರಿ ಸುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಸುತ್ತ ಬ್ಯಾರಿಕೇಡ್‌ಗಳನ್ನು ಹಾಕಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಡಿವೈಎಸ್‌ಪಿಕಚೇರಿ ಪಕ್ಕದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಲು ಸಮಸ್ಯೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT