‘ಎಡಗೈ ಮಾದಿಗ ಸಮುದಾಯಕ್ಕೆ ಸೇರಿರುವ ಕಾರಜೋಳ ಹಾಗೂ ರಮೇಶ್ ಜಿಗಜಿಣಗಿ ಸಂಸದರಾಗಿ ಆಯ್ಕೆಯಾಗಿರುವುದು ಸಂತಸ. ಕೇಂದ್ರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಚಿವ ಸಂಪುಟದಲ್ಲಿ ಎಡಗೈ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡದಿರುವುದು ಬೇಸರದ ಸಂಗತಿ. ರಾಜಕೀಯ ಮತ್ತು ಆರ್ಥಿಕವಾಗಿ ಕುಗ್ಗಿರುವ ಸಮುದಾಯವನ್ನು ಗುರುತಿಸುವಲ್ಲಿ ಕೇಂದ್ರ ಸರ್ಕಾರ ಎಡವಿದೆ. ಮಾದಿಗ ಸಮುದಾಯದಿಂದ ಆಯ್ಕೆಯಾಗಿರುವ ಇಬ್ಬರೂ ಸಜ್ಜನ ರಾಜಕಾರಣಿಗಳು. ಮತ ಹಾಕಿಸಿಕೊಳ್ಳಲು ಮಾತ್ರ ನಮ್ಮ ಸಮುದಾಯವನ್ನು ಬಳಸಿಕೊಂಡು ನಂತರ ದೂರವಿಡುವುದು ಸತ್ಸಂಪ್ರದಾಯವಲ್ಲ’ ಎಂದು ಸ್ವಾಮೀಜಿ ಹೇಳಿದ್ದಾರೆ.