<p><strong>ಚಿತ್ರದುರ್ಗ:</strong> ಸಮಾಜದಲ್ಲಿ ಬೇರೂರಿದ್ದ ಮೂಢನಂಬಿಕೆ ಹಾಗೂ ಕಂದಾಚಾರಗಳ ವಿರುದ್ಧ ಶಂಕರಾಚಾರ್ಯರು ಧ್ವನಿ ಎತ್ತಿದ್ದರು. ಭಾರತೀಯ ಸಮಾಜದ ಸುಧಾರಣೆಯಲ್ಲಿ ಅವರು ಪ್ರಮುಖ ಪಾತ್ರವಹಿಸಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಶಂಕರಾಚಾರ್ಯ ಜಯಂತಿಯ ಸರಳ ಆಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಮಹನೀಯರ, ದಾರ್ಶನಿಕರ ಚಿಂತನೆ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ತೋರಿದ ದಾರಿಯಲ್ಲಿ ಸಾಗಬೇಕು. ಮಹನೀಯರ ಜಯಂತಿಗಳ ಆಚರಣೆಯಿಂದ ಮೌಲ್ಯಯುತ ಹಾಗೂ ಅರ್ಥಪೂರ್ಣ ಸಂದೇಶಗಳು ಸಮಾಜಕ್ಕೆ ತಲುಪಲು ಸಾಧ್ಯ. ಶಂಕರಾಚಾರ್ಯರ ತತ್ವಾದರ್ಶಗಳು ಸಮಾಜಕ್ಕೆ ಮಾದರಿ’ ಎಂದು ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಧನಂಜಯ ಮಾತನಾಡಿ, ‘ಶಂಕರಾಚಾರ್ಯರು ದೇಶದ ಎಲ್ಲೆಡೆ ಸಂಚರಿಸಿ ಅದ್ವೈತ ಸಿದ್ಧಾಂತ ಪ್ರಚಾರ ಮಾಡಿದರು. ಉತ್ತಮ ಬದುಕಿಗೆ ಶಂಕರಾಚಾರ್ಯರ ಸಂದೇಶಗಳು ಮಾರ್ಗದರ್ಶಕ. ಅವರ ತತ್ವ, ಸಿದ್ದಾಂತಗಳು ಸಾರ್ವಕಾಲಿಕ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಸಮಾಜದಲ್ಲಿ ಬೇರೂರಿದ್ದ ಮೂಢನಂಬಿಕೆ ಹಾಗೂ ಕಂದಾಚಾರಗಳ ವಿರುದ್ಧ ಶಂಕರಾಚಾರ್ಯರು ಧ್ವನಿ ಎತ್ತಿದ್ದರು. ಭಾರತೀಯ ಸಮಾಜದ ಸುಧಾರಣೆಯಲ್ಲಿ ಅವರು ಪ್ರಮುಖ ಪಾತ್ರವಹಿಸಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಶಂಕರಾಚಾರ್ಯ ಜಯಂತಿಯ ಸರಳ ಆಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಮಹನೀಯರ, ದಾರ್ಶನಿಕರ ಚಿಂತನೆ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ತೋರಿದ ದಾರಿಯಲ್ಲಿ ಸಾಗಬೇಕು. ಮಹನೀಯರ ಜಯಂತಿಗಳ ಆಚರಣೆಯಿಂದ ಮೌಲ್ಯಯುತ ಹಾಗೂ ಅರ್ಥಪೂರ್ಣ ಸಂದೇಶಗಳು ಸಮಾಜಕ್ಕೆ ತಲುಪಲು ಸಾಧ್ಯ. ಶಂಕರಾಚಾರ್ಯರ ತತ್ವಾದರ್ಶಗಳು ಸಮಾಜಕ್ಕೆ ಮಾದರಿ’ ಎಂದು ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಧನಂಜಯ ಮಾತನಾಡಿ, ‘ಶಂಕರಾಚಾರ್ಯರು ದೇಶದ ಎಲ್ಲೆಡೆ ಸಂಚರಿಸಿ ಅದ್ವೈತ ಸಿದ್ಧಾಂತ ಪ್ರಚಾರ ಮಾಡಿದರು. ಉತ್ತಮ ಬದುಕಿಗೆ ಶಂಕರಾಚಾರ್ಯರ ಸಂದೇಶಗಳು ಮಾರ್ಗದರ್ಶಕ. ಅವರ ತತ್ವ, ಸಿದ್ದಾಂತಗಳು ಸಾರ್ವಕಾಲಿಕ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>