<p><strong>ಚಳ್ಳಕೆರೆ</strong>: ಹನ್ನೆರಡನೇ ಶತಮಾನದ ಶಿವಶರಣ ಕಾಯಕ ನಿಷ್ಠೆ ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯಪಟ್ಟರು.</p>.<p>ನಗರದ ತಾಲ್ಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಮಡಿವಾಳ ಸಮಾಜದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶರಣ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಾಜದಲ್ಲಿನ ಅಸಮಾನತೆ ನಿವಾರಣೆ ಸಲುವಾಗಿ ವಿವಿಧ ವೃತ್ತಿಪರ ಶ್ರಮಜೀವಿಗಳು ಒಟ್ಟುಗೂಡಿ ರೂಪಿಸಿದ್ದ ಚಳವಳಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು. ಆ ಪರಿಸರದಲ್ಲಿ ಬೆಳೆದ ಪ್ರಮುಖ ವಚನಕಾರ ಮಡಿವಾಳ ಮಾಚಿದೇವರು. ನೈತಿಕ- ವೈಚಾರಿಕ ಚಿಂತನೆಗಳಿರುವ ಮಾಚಿದೇವರ ವಚನಗಳನ್ನು ಸರಿಯಾಗಿ ಅರ್ಥೈಸಿಕೊಳ್ಳುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಹೇಳಿದರು.</p>.<p>ಮಡಿವಾಳ ಸಂಘದ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ನರಹರಿನಗರ ಮಂಜುನಾಥ್ ಮಾತನಾಡಿ, ‘ಮಡಿವಾಳ ಸಮಾಜದ ಮಕ್ಕಳ ಶಿಕ್ಷಣಕ್ಕಾಗಿ 2 ಎಕರೆ ಸರ್ಕಾರಿ ಜಾಗ ಮಂಜೂರು ಮಾಡಬೇಕು. ಸಮುದಾಯ ಭವನ ಮತ್ತು ಹಾಸ್ಟೆಲ್ ಸೌಲಭ್ಯ ಒದಗಿಸಬೇಕು’ ಎಂದು ಶಾಸಕರಲ್ಲಿ ಮನವಿ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ನೋಡೆಲ್ ಅಧಿಕಾರಿ ಬಿ.ಮಂಜುನಾಥ್, ತಹಶೀಲ್ದಾರ್ ರೇಹಾನ್ ಪಾಷ, ಮಡಿವಾಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ, ತಾಲ್ಲೂಕು ಘಟಕದ ಅಧ್ಯಕ್ಷ ನಾಗಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಮಂಜುನಾಥ್ ಮಾತನಾಡಿದರು.</p>.<p>ಇಒ ಎಚ್.ಶಶಿಧರ್, ನಗರಸಭೆ ಪೌರಾಯುಕ್ತ ಜಗರೆಡ್ಡಿ, ಸದಸ್ಯ ರಮೇಶಗೌಡ, ಮಡಿವಾಳ ಸಮಾಜದ ಮುಖಂಡ ಕುಶಾಲಪ್ಪ, ಪ್ರಕಾಶ್, ಜೀವನ್, ದೇವರಮರಿಕುಂಟೆ ಮೃತ್ಯುಂಜಯ, ಪಿಡಿಒ ವೇದಮೂರ್ತಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ಹನ್ನೆರಡನೇ ಶತಮಾನದ ಶಿವಶರಣ ಕಾಯಕ ನಿಷ್ಠೆ ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯಪಟ್ಟರು.</p>.<p>ನಗರದ ತಾಲ್ಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಮಡಿವಾಳ ಸಮಾಜದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶರಣ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಾಜದಲ್ಲಿನ ಅಸಮಾನತೆ ನಿವಾರಣೆ ಸಲುವಾಗಿ ವಿವಿಧ ವೃತ್ತಿಪರ ಶ್ರಮಜೀವಿಗಳು ಒಟ್ಟುಗೂಡಿ ರೂಪಿಸಿದ್ದ ಚಳವಳಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು. ಆ ಪರಿಸರದಲ್ಲಿ ಬೆಳೆದ ಪ್ರಮುಖ ವಚನಕಾರ ಮಡಿವಾಳ ಮಾಚಿದೇವರು. ನೈತಿಕ- ವೈಚಾರಿಕ ಚಿಂತನೆಗಳಿರುವ ಮಾಚಿದೇವರ ವಚನಗಳನ್ನು ಸರಿಯಾಗಿ ಅರ್ಥೈಸಿಕೊಳ್ಳುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಹೇಳಿದರು.</p>.<p>ಮಡಿವಾಳ ಸಂಘದ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ನರಹರಿನಗರ ಮಂಜುನಾಥ್ ಮಾತನಾಡಿ, ‘ಮಡಿವಾಳ ಸಮಾಜದ ಮಕ್ಕಳ ಶಿಕ್ಷಣಕ್ಕಾಗಿ 2 ಎಕರೆ ಸರ್ಕಾರಿ ಜಾಗ ಮಂಜೂರು ಮಾಡಬೇಕು. ಸಮುದಾಯ ಭವನ ಮತ್ತು ಹಾಸ್ಟೆಲ್ ಸೌಲಭ್ಯ ಒದಗಿಸಬೇಕು’ ಎಂದು ಶಾಸಕರಲ್ಲಿ ಮನವಿ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ನೋಡೆಲ್ ಅಧಿಕಾರಿ ಬಿ.ಮಂಜುನಾಥ್, ತಹಶೀಲ್ದಾರ್ ರೇಹಾನ್ ಪಾಷ, ಮಡಿವಾಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ, ತಾಲ್ಲೂಕು ಘಟಕದ ಅಧ್ಯಕ್ಷ ನಾಗಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಮಂಜುನಾಥ್ ಮಾತನಾಡಿದರು.</p>.<p>ಇಒ ಎಚ್.ಶಶಿಧರ್, ನಗರಸಭೆ ಪೌರಾಯುಕ್ತ ಜಗರೆಡ್ಡಿ, ಸದಸ್ಯ ರಮೇಶಗೌಡ, ಮಡಿವಾಳ ಸಮಾಜದ ಮುಖಂಡ ಕುಶಾಲಪ್ಪ, ಪ್ರಕಾಶ್, ಜೀವನ್, ದೇವರಮರಿಕುಂಟೆ ಮೃತ್ಯುಂಜಯ, ಪಿಡಿಒ ವೇದಮೂರ್ತಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>