ಕುಸ್ತಿ, ಕ್ರೀಡಾಕೂಟ, ಸೌಹಾರ್ದ ನಡಿಗೆ ಮುಂತಾದ ಜನಜಂಗುಳಿ ಸೇರುವ ಕಾರ್ಯಕ್ರಮ ಈ ಬಾರಿ ರದ್ದುಪಡಿಸಲಾಗಿದೆ. ಸಹಜ ಶಿವಯೋಗ, ಭಜನೆ, ವೀರಗಾಸೆ, ಜಾನಪದ ಹಾಡುಗಳ ಸ್ಪರ್ಧೆ, ವಿಚಾರಗೋಷ್ಠಿ, ಕೃಷಿ ಹಾಗೂ ಕೈಗಾರಿಕಾ ಮೇಳಗಳು ಎಂದಿನಂತೆಯೇ ನಡೆಯಲಿವೆ. ವಿಜಯದಶಮಿಯ ದಿನ ನಡೆಯುತ್ತಿದ್ದ ಜಾನಪದ ಕಲಾಮೇಳ ಮೆರವಣಿಗೆಯನ್ನೂ ಕೈಬಿಡಲಾಗಿದೆ.