5 ಸಾವಿರ ವಿದ್ಯಾರ್ಥಿಗಳು ಭಾಗಿ
‘ಈ ಕಾರ್ಯಕ್ರಮದಲ್ಲಿ 5 ಸಾವಿರ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಕ್ರಮವಹಿಸಲಾಗಿದೆ. ಕಾರ್ಯಕ್ರಮದ ಕುರಿತು ಜಾಗೃತಿ ಉಂಟು ಮಾಡಲು ಪ್ರತಿ ಕಾಲೇಜಿಗೆ ಭೇಟಿ ನೀಡಲಾಗುತ್ತದೆ’ ಎಂದು ಬಸವಕುಮಾರ ಸ್ವಾಮೀಜಿ ತಿಳಿಸಿದರು. ‘ಸಾಮಾಜಿಕ ಜಾಲತಾಣಗಳ ಯುಗದಲ್ಲಿ ಯುವಜನರು ಗೊಂದಲದಲ್ಲಿ ಮುಳುಗಿದ್ದಾರೆ. ಭವಿಷ್ಯದ ಬಗ್ಗೆ ಗುರಿ ಇಲ್ಲದೇ ನಡೆಯುತ್ತಿದ್ದಾರೆ. ಅವರಿಗೆ ಗುರಿ ಬದ್ಧತೆ ಕಾಯಕ ತತ್ವದ ತಿಳಿವಳಿಕೆ ಅಗತ್ಯ. ಹೀಗಾಗಿ ಯುವಜನೋತ್ಸವ ಆಯೋಜಿಸಲಾಗುತ್ತಿದೆ’ ಎಂದರು.