ಪೊಲೀಸ್ ವಶಕ್ಕೆ ಪಡೆದಿರುವ ತನಿಖಾ ತಂಡ ಆರೋಪಿಯನ್ನು ಡಿವೈಎಸ್ಪಿ ಕಚೇರಿಯಲ್ಲಿ ಉಳಿಸಿದೆ. ಶನಿವಾರ ರಾತ್ರಿ ಊಟ ಸೇವಿಸಿದ ಶರಣರು ವಿಶ್ರಾಂತಿ ಪಡೆದರು. ಬೆಳಿಗ್ಗೆ ಎದ್ದು ನಿತ್ಯಕರ್ಮ ಮುಗಿಸಿದ ಅವರಿಗೆ ತಿಂಡಿ ನೀಡಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ವಿಚಾರಣೆ ಮುಂದುವರಿಸಲಾಗಿದೆ. ಬೆಳಿಗ್ಗೆ 11.20ಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.