ಬಿ.ಡಿ. ರಸ್ತೆ ಸಂಪರ್ಕಿಸುವ ಮಾರ್ಗಗಳಲ್ಲಿ ಬ್ಯಾರಿಕೇಡ್ಗಳನ್ನು ಇಟ್ಟು ಸಂಚಾರ ನಿರ್ಬಂಧಿಸಲಾಯಿತು. ಮಧ್ಯಾಹ್ನ 3ಕ್ಕೆ ಪ್ರವಾಸಿ ಮಂದಿರಕ್ಕೆ ಬಂದ ರಾಜ್ಯಪಾಲರಿಗೆ ಪೊಲೀಸರು ಗೌರವ ಶ್ರೀರಕ್ಷೆ ನೀಡಿದರು. ರಾಜ್ಯಪಾಲರಿಗೆ ಜಿಲ್ಲಾಡಳಿತ ತಿಂಡಿ ಹಾಗೂ ಕಾಫಿ ವ್ಯವಸ್ಥೆ ಮಾಡಿತ್ತು. ದಾವಣಗೆರೆಯಿಂದ ತರಿಸಿದ್ದ ಮಂಡಕ್ಕಿ, ಉಪ್ಪಿಟ್ಟು, ಬಜ್ಜಿ ಸೇವಿಸಿ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಪ್ರಯಾಣ ಮುಂದುವರಿಸಿದರು.