<p><strong>ಸಿರಿಗೆರೆ</strong>: ತರಳಬಾಳು ಜಗದ್ಗುರು ಬೃಹನ್ಮಠದ 20ನೇ ಪೀಠಾಧಿಕಾರಿಗಳಾಗಿದ್ದ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ 34ನೇ ಶ್ರದ್ಧಾಂಜಲಿ ಸಮಾರಂಭವನ್ನು ಈ ಸೆ. 22ರಿಂದ 3 ದಿನ ಆಚರಿಸಲಾಗುವುದು.</p>.<p>ಸದ್ಧರ್ಮ ನ್ಯಾಯಪೀಠದಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಶ್ರೀ ತರಳಬಾಳು ಪೀಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಈ ವಿಷಯವನ್ನು ಪ್ರಕಟಿಸಿದರು.</p>.<p>ಕಳೆದ ವರ್ಷಗಳಲ್ಲಿ ಶ್ರದ್ಧಾಂಜಲಿ ಸಮಾರಂಭವನ್ನು 5 ದಿನ ವಿಜೃಂಭಣೆಯಿಂದ ನಡೆಸಲಾಗುತ್ತಿತ್ತು. ಈ ಬಾರಿ ಆರಂಭಗೊಂಡು ಮುಂಗಾರು ಮಳೆ ಬಿಡುವು ಕೊಡುತ್ತಿಲ್ಲ. ಜೊತೆಗೆ ಸಿರಿಗೆರೆಯಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಮಧ್ಯ ವಾರ್ಷಿಕ ಪರೀಕ್ಷೆಗಳ ಕಾಲ ಆಗಿರುವುದರಿಂದ ಈ ಬಾರಿಯ ಸಮಾರಂಭವನ್ನು ಮೂರು ದಿನಗಳಿಗೆ ಮೊಟಕುಗೊಳಿಸಲಾಗಿದೆ.</p>.<p>ಶ್ರದ್ಧಾಂಜಲಿ ಅಂಗವಾಗಿ ಬೃಹನ್ಮಠದ ಆವರಣದಲ್ಲಿರುವ ಐಕ್ಯಮಂಟಪದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಶಿವಕುಮಾರ ಶ್ರೀಗಳ ಭಾವಚಿತ್ರದ ಮೆರವಣಿಗೆಯನ್ನು ಆಯೋಜಿಸಲಾಗುವುದು. ಸಮಾರಂಭಕ್ಕೆ ಬರುವ ಭಕ್ತರಿಗೆ ಮೂರು ದಿನವೂ ದಾಸೋಹ ಏರ್ಪಡಿಸಲಾಗುವುದು. ಚನ್ನಗಿರಿಯ ತುಮಕೋಸ್ ಸಂಸ್ಥೆಯವರು ಲಾಡುಗಳನ್ನು ದಾಸೋಹಕ್ಕೆ ನೀಡುವರು.</p>.<p>ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಹಲವು ಭಕ್ತರು ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಅಗತ್ಯವಾದ ದವಸ- ಧಾನ್ಯ, ಅಕ್ಕಿ, ಬೆಲ್ಲ, ಬೇಳೆ, ಎಣ್ಣೆ ಹಾಗೂ ಕಾಣಿಕೆ ನೀಡುವುದಾಗಿ ವಾಗ್ದಾನ ಮಾಡಿದರು.</p>.<p>ಚಿಕ್ಕಬೆನ್ನೂರು ತೀರ್ಥಪ್ಪ, ಸಿ,ಆರ್. ನಾಗರಾಜ್ ಮಾತನಾಡಿದರು. ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್. ಮರುಳಸಿದ್ದಯ್ಯ ಸ್ವಾಗತಿಸಿದರು. ಕಾರ್ಯದರ್ಶಿ ವಿಜಯಾಚಾರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ತರಳಬಾಳು ಜಗದ್ಗುರು ಬೃಹನ್ಮಠದ 20ನೇ ಪೀಠಾಧಿಕಾರಿಗಳಾಗಿದ್ದ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ 34ನೇ ಶ್ರದ್ಧಾಂಜಲಿ ಸಮಾರಂಭವನ್ನು ಈ ಸೆ. 22ರಿಂದ 3 ದಿನ ಆಚರಿಸಲಾಗುವುದು.</p>.<p>ಸದ್ಧರ್ಮ ನ್ಯಾಯಪೀಠದಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಶ್ರೀ ತರಳಬಾಳು ಪೀಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಈ ವಿಷಯವನ್ನು ಪ್ರಕಟಿಸಿದರು.</p>.<p>ಕಳೆದ ವರ್ಷಗಳಲ್ಲಿ ಶ್ರದ್ಧಾಂಜಲಿ ಸಮಾರಂಭವನ್ನು 5 ದಿನ ವಿಜೃಂಭಣೆಯಿಂದ ನಡೆಸಲಾಗುತ್ತಿತ್ತು. ಈ ಬಾರಿ ಆರಂಭಗೊಂಡು ಮುಂಗಾರು ಮಳೆ ಬಿಡುವು ಕೊಡುತ್ತಿಲ್ಲ. ಜೊತೆಗೆ ಸಿರಿಗೆರೆಯಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಮಧ್ಯ ವಾರ್ಷಿಕ ಪರೀಕ್ಷೆಗಳ ಕಾಲ ಆಗಿರುವುದರಿಂದ ಈ ಬಾರಿಯ ಸಮಾರಂಭವನ್ನು ಮೂರು ದಿನಗಳಿಗೆ ಮೊಟಕುಗೊಳಿಸಲಾಗಿದೆ.</p>.<p>ಶ್ರದ್ಧಾಂಜಲಿ ಅಂಗವಾಗಿ ಬೃಹನ್ಮಠದ ಆವರಣದಲ್ಲಿರುವ ಐಕ್ಯಮಂಟಪದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಶಿವಕುಮಾರ ಶ್ರೀಗಳ ಭಾವಚಿತ್ರದ ಮೆರವಣಿಗೆಯನ್ನು ಆಯೋಜಿಸಲಾಗುವುದು. ಸಮಾರಂಭಕ್ಕೆ ಬರುವ ಭಕ್ತರಿಗೆ ಮೂರು ದಿನವೂ ದಾಸೋಹ ಏರ್ಪಡಿಸಲಾಗುವುದು. ಚನ್ನಗಿರಿಯ ತುಮಕೋಸ್ ಸಂಸ್ಥೆಯವರು ಲಾಡುಗಳನ್ನು ದಾಸೋಹಕ್ಕೆ ನೀಡುವರು.</p>.<p>ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಹಲವು ಭಕ್ತರು ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಅಗತ್ಯವಾದ ದವಸ- ಧಾನ್ಯ, ಅಕ್ಕಿ, ಬೆಲ್ಲ, ಬೇಳೆ, ಎಣ್ಣೆ ಹಾಗೂ ಕಾಣಿಕೆ ನೀಡುವುದಾಗಿ ವಾಗ್ದಾನ ಮಾಡಿದರು.</p>.<p>ಚಿಕ್ಕಬೆನ್ನೂರು ತೀರ್ಥಪ್ಪ, ಸಿ,ಆರ್. ನಾಗರಾಜ್ ಮಾತನಾಡಿದರು. ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್. ಮರುಳಸಿದ್ದಯ್ಯ ಸ್ವಾಗತಿಸಿದರು. ಕಾರ್ಯದರ್ಶಿ ವಿಜಯಾಚಾರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>