‘ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದಂತಹ ದಿ. ದೇವರಾಜು ಅರಸು ನಂತರ ದಲಿತ, ಅಲ್ಪಸಂಖ್ಯಾತ, ಶೋಷಿತ, ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಕೊಡುಗೆ ನೀಡಿದ ಮುಖ್ಯಮಂತ್ರಿ ಯಾರಾದರು ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಆದರೆ, ಈ ಸಮುದಾಯದವರು ಸ್ವ–ಹಿತಾಸಕ್ತಿಗಾಗಿ ಬಿಜೆಪಿಯ ಜನವಿರೋಧಿ ನಡೆ ಕಂಡರೂ ಪಕ್ಷದಲ್ಲಿ ಮೌನವಹಿಸಿದ್ದಾರೆ. ಇದು ಎಲ್ಲರಿಗೂ ತಿಳಿದಿರುವ ವಿಷಯ’ ಎಂದು ಹೇಳಿದರು.