‘ಬಾಯಿ ಮಾತಿಗೆ ದಲಿತ ಪರ ಎನ್ನುವ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ದಲಿತರನ್ನು ಸಮಾಧಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಅದರ ತನಿಖೆ ನಡೆದರೆ, ಅನೇಕರು ಸಿಕ್ಕಿಬೀಳುತ್ತಿದ್ದರು. ಅದಕ್ಕಾಗಿಯೇ ಲೋಕಾಯುಕ್ತಕ್ಕೆ ಇದ್ದಂಥ ಶಕ್ತಿ ಕಸಿದುಕೊಂಡು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಜಾರಿಗೆ ತಂದಿದ್ದು’ ಎಂದು ಆರೋಪಿಸಿದರು.