ಚಿತ್ರದುರ್ಗ: ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುಟುಂಬವೊಂದರ ರಿಮೋಟ್ ಕಂಟ್ರೋಲ್ನಲ್ಲಿ ಇದ್ದಾರೆ. ಇದು ನಿಜಕ್ಕೂ ದುಃಖದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
‘ಬೊಮ್ಮಾಯಿ ಅವರು ಆರ್ಎಸ್ಎಸ್ ರಿಮೋಟ್ ಕಂಟ್ರೋಲ್ನಲ್ಲಿ ಇದ್ದಾರೆ’ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಸೋಮವಾರ ಇಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
‘ಆರ್ಎಸ್ಎಸ್ ರಾಷ್ಟ್ರಕಟ್ಟುವ ಸಂಸ್ಥೆ. ಈ ಕಾರ್ಯಕ್ಕೆ ಇಡೀ ಸಂಸ್ಥೆ ಸಮರ್ಪಣೆ ಮಾಡಿಕೊಂಡಿದೆ. ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನು ನಾನು ವಿರೋಧಿಸುವುದಿಲ್ಲ’ ಎಂದು ಹೇಳಿದರು.