<p><strong>ಚಿತ್ರದುರ್ಗ: </strong>ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದು ರಾಜಕೀಯ ಪ್ರೇರಿತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಚ್ಚಿ ಹೋಗಿದ್ದ ಪ್ರಕರಣವನ್ನು ಮತ್ತೆ ಕೆದಕಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಬಿಜೆಪಿ ಹಲವು ಬಾರಿ ಹೀಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ’ ಎಂದು ಆರೋಪಿಸಿದರು.</p>.<p>‘ವಿನಯ್ ಕುಲಕರ್ಣಿ ಅವರೊಂದಿಗೆ ಮಾತನಾಡಿದ್ದೇನೆ. ತಪ್ಪು ಮಾಡಿಲ್ಲವೆಂದು ಅವರು ಹೇಳಿದ್ದಾರೆ. ಪ್ರಕರಣ ವಿಚಾರಣೆಯ ಹಂತದಲ್ಲಿರುವುದರಿಂದ ಹೆಚ್ಚು ಹೇಳಲು ಇಷ್ಟಪಡುವುದಿಲ್ಲ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಲ್ಲಿ ಪ್ರೌಢಿಮೆ ಇಲ್ಲ. ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ’ ಎಂದರು.</p>.<p>‘ಶಾಲೆಗಳನ್ನು ತರಾತುರಿಯಲ್ಲಿ ಪ್ರಾರಂಭ ಮಾಡುವುದು ಸರಿಯಲ್ಲ. ಕೋವಿಡ್ ಲಸಿಕೆ ಲಭ್ಯವಾಗುವವರೆಗೂ ಶಾಲೆ ಮುಚ್ಚುವುದೇ ಸೂಕ್ತ. ಪ್ರಸಕ್ತ ಶೈಕ್ಷಣಿಕ ವರ್ಷ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಿದರೆ ಏನು ತೊಂದರೆ ಆಗದು. ಕೋವಿಡ್ ತೊಲಗುವವರೆಗೂ ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ನಡೆಸಬಾರದು’ ಎಂದು ಪ್ರತಿಕ್ರಿಯಿಸಿದರು..</p>.<p>‘ರಾಜ್ಯದ ಹಣಕಾಸು ಸ್ಥಿತಿ ತೀರಾ ಹದಗೆಟ್ಟಿದೆ. ಸರ್ಕಾರಿ ನೌಕರರ ವೇತನ ನೀಡಲು ಖಜಾನೆಯಲ್ಲಿ ಹಣವಿಲ್ಲ. ಒಂದೇ ವರ್ಷದಲ್ಲಿ ₹ 90 ಸಾವಿರ ಕೋಟಿ ಸಾಲ ಪಡೆದಿದ್ದಾರೆ. ಕರ, ತೆರಿಗೆ ವಸೂಲಿ ಆಗುತ್ತಿಲ್ಲ. ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ತಪ್ಪು’ ಎಂದು ಹೇಳಿದರು.</p>.<p class="Subhead"><strong>ಒತ್ತಡ ತಂತ್ರಕ್ಕೆ ಬಗ್ಗಲ್ಲ: ಪ್ರಿಯಾಂಕ ಖರ್ಗೆ</strong></p>.<p>ಬಿಜೆಪಿಯ ಒತ್ತಡ, ಬೆದರಿಕೆಯ ತಂತ್ರಕ್ಕೆ ಕಾಂಗ್ರೆಸ್ ನಾಯಕರು ಬಗ್ಗುವುದಿಲ್ಲ. ಪ್ರಬಲ ವಿರೋಧ ಪಕ್ಷವಾಗಿ ಬಿಜೆಪಿಯನ್ನು ಪ್ರಶ್ನಿಸುತ್ತೇವೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಮೇಲೆ ದಾಳಿ ನಡೆಸಿದ್ದು ಮುಗಿದ ಮೇಲೆ ವಿನಯ್ ಕುಲಕರ್ಣಿ ಅವರನ್ನು ಹೆದರಿಸುತ್ತಿದೆ. ಇಂತಹ ಬೆದರಿಕೆಗೆ ಕಾಂಗ್ರೆಸ್ ಮಣಿಯುವುದಿಲ್ಲ’ ಎಂದು ಪ್ರತಿಕ್ರಿಯೆ ನೀಡಿದರು.</p>.<p>***</p>.<p>ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅಧಿಕೃತ ಮುಖ್ಯಮಂತ್ರಿ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ಡಿಫ್ಯಾಕ್ಟ್ ಮುಖ್ಯಮಂತ್ರಿ.<br />– ಸಿದ್ದರಾಮಯ್ಯ,ವಿರೋಧ ಪಕ್ಷದ ನಾಯಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದು ರಾಜಕೀಯ ಪ್ರೇರಿತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಚ್ಚಿ ಹೋಗಿದ್ದ ಪ್ರಕರಣವನ್ನು ಮತ್ತೆ ಕೆದಕಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಬಿಜೆಪಿ ಹಲವು ಬಾರಿ ಹೀಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ’ ಎಂದು ಆರೋಪಿಸಿದರು.</p>.<p>‘ವಿನಯ್ ಕುಲಕರ್ಣಿ ಅವರೊಂದಿಗೆ ಮಾತನಾಡಿದ್ದೇನೆ. ತಪ್ಪು ಮಾಡಿಲ್ಲವೆಂದು ಅವರು ಹೇಳಿದ್ದಾರೆ. ಪ್ರಕರಣ ವಿಚಾರಣೆಯ ಹಂತದಲ್ಲಿರುವುದರಿಂದ ಹೆಚ್ಚು ಹೇಳಲು ಇಷ್ಟಪಡುವುದಿಲ್ಲ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಲ್ಲಿ ಪ್ರೌಢಿಮೆ ಇಲ್ಲ. ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ’ ಎಂದರು.</p>.<p>‘ಶಾಲೆಗಳನ್ನು ತರಾತುರಿಯಲ್ಲಿ ಪ್ರಾರಂಭ ಮಾಡುವುದು ಸರಿಯಲ್ಲ. ಕೋವಿಡ್ ಲಸಿಕೆ ಲಭ್ಯವಾಗುವವರೆಗೂ ಶಾಲೆ ಮುಚ್ಚುವುದೇ ಸೂಕ್ತ. ಪ್ರಸಕ್ತ ಶೈಕ್ಷಣಿಕ ವರ್ಷ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಿದರೆ ಏನು ತೊಂದರೆ ಆಗದು. ಕೋವಿಡ್ ತೊಲಗುವವರೆಗೂ ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ನಡೆಸಬಾರದು’ ಎಂದು ಪ್ರತಿಕ್ರಿಯಿಸಿದರು..</p>.<p>‘ರಾಜ್ಯದ ಹಣಕಾಸು ಸ್ಥಿತಿ ತೀರಾ ಹದಗೆಟ್ಟಿದೆ. ಸರ್ಕಾರಿ ನೌಕರರ ವೇತನ ನೀಡಲು ಖಜಾನೆಯಲ್ಲಿ ಹಣವಿಲ್ಲ. ಒಂದೇ ವರ್ಷದಲ್ಲಿ ₹ 90 ಸಾವಿರ ಕೋಟಿ ಸಾಲ ಪಡೆದಿದ್ದಾರೆ. ಕರ, ತೆರಿಗೆ ವಸೂಲಿ ಆಗುತ್ತಿಲ್ಲ. ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ತಪ್ಪು’ ಎಂದು ಹೇಳಿದರು.</p>.<p class="Subhead"><strong>ಒತ್ತಡ ತಂತ್ರಕ್ಕೆ ಬಗ್ಗಲ್ಲ: ಪ್ರಿಯಾಂಕ ಖರ್ಗೆ</strong></p>.<p>ಬಿಜೆಪಿಯ ಒತ್ತಡ, ಬೆದರಿಕೆಯ ತಂತ್ರಕ್ಕೆ ಕಾಂಗ್ರೆಸ್ ನಾಯಕರು ಬಗ್ಗುವುದಿಲ್ಲ. ಪ್ರಬಲ ವಿರೋಧ ಪಕ್ಷವಾಗಿ ಬಿಜೆಪಿಯನ್ನು ಪ್ರಶ್ನಿಸುತ್ತೇವೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಮೇಲೆ ದಾಳಿ ನಡೆಸಿದ್ದು ಮುಗಿದ ಮೇಲೆ ವಿನಯ್ ಕುಲಕರ್ಣಿ ಅವರನ್ನು ಹೆದರಿಸುತ್ತಿದೆ. ಇಂತಹ ಬೆದರಿಕೆಗೆ ಕಾಂಗ್ರೆಸ್ ಮಣಿಯುವುದಿಲ್ಲ’ ಎಂದು ಪ್ರತಿಕ್ರಿಯೆ ನೀಡಿದರು.</p>.<p>***</p>.<p>ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅಧಿಕೃತ ಮುಖ್ಯಮಂತ್ರಿ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ಡಿಫ್ಯಾಕ್ಟ್ ಮುಖ್ಯಮಂತ್ರಿ.<br />– ಸಿದ್ದರಾಮಯ್ಯ,ವಿರೋಧ ಪಕ್ಷದ ನಾಯಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>