‘ಜನಮುಖಿ ಸಾಹಿತಿಯಾಗಿ, ನೊಂದವರ ದನಿಯಾಗಿದ್ದ ಅವರ ಕ್ರಾಂತಿಕಾರಿ ಗೀತೆಗಳು ಶೋಷಿತರ ಹೃದಯಲ್ಲಿ ವಿದ್ಯುತ್ ಸಂಚಲನ ಮೂಡಿಸುವ ಮೂಲಕ ದಲಿತ ಚಳವಳಿ ಯಶಸ್ವಿಯಾಗಲು ಪ್ರೇರೇಪಿಸುತ್ತಿದ್ದವು. ಹಿಂದಿನ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಯ ಪರ ಕಾನೂನು ರಚಿಸುವಾಗಲೂ ಅವರ ಸಲಹೆ ಪಡೆಯಲಾಗಿತ್ತು. ವಿಧಾನಪರಿಷತ್ ಸದಸ್ಯರಾದರೂ ಪರಿಷತ್ ಸಭೆಗೆ ಹೋಗದಂತೆ ಪೊಲೀಸರು ಒಮ್ಮೆ ತಡೆದಿದ್ದರು. ಆಗಲೂ ಮೌನವಾಗಿದ್ದರು. ಸದಸ್ಯರೆಂದು ತಿಳಿದ ನಂತರ ಒಳಗೆ ಬಿಟ್ಟಿದ್ದರು. ಅನೇಕ ನೋವು ಅನುಭವಿಸಿದ್ದರೂ ಯಾರ ಕುರಿತೂ ಹಗುರವಾಗಿ ಮಾತನಾಡದ ಸರಳ, ಸಜ್ಜನಿಕೆಯ ವ್ಯಕ್ತಿತ್ವ ಅವರದ್ದಾಗಿತ್ತು’ ಎಂದು ನೆನಪು ಮಾಡಿಕೊಂಡರು.