<p><strong>ಮೊಳಕಾಲ್ಮುರು:</strong> ಜಿಲ್ಲೆಯ ಪ್ರಮುಖ ಸಿಡಿ ಉತ್ಸವಗಳಲ್ಲಿ ಒಂದಾದ ತಾಲ್ಲೂಕಿನ ರಾಯಾಪುರದ ಕೋಟೆಗುಡ್ಡ ಮಾರಮ್ಮದೇವಿ ಸಿಡಿ ಉತ್ಸವ ಗುರುವಾರ ಸಂಜೆ ವೈಭದಿಂದ ನಡೆಯಿತು.</p>.<p>ಪ್ರತಿವರ್ಷ ಶೂನ್ಯಮಾಸದಲ್ಲಿ ಈ ಜಾತ್ರೆ ನಡೆಸಿಕೊಂಡು ಬರಲಾಗುತ್ತಿದೆ. ಉತ್ಸವದ ಅಂಗವಾಗಿ ಮಂಗಳವಾರ ದೇವಿಯನ್ನು ಬುಡಕಟ್ಟು ಸಂಸ್ಕೃತಿಗಳ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ಗಂಗಾಪೂಜೆಗೆ ಕರೆದುಕೊಂಡು ಹೋಗಲಾಗಿತ್ತು. ವಾಪಸ್ ಬಂದ ನಂತರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಗಳನ್ನು ನಡೆಸಲಾಯಿತು. ಬುಧವಾರ ವಿರಪೋತರಾಜುಲು ಅವರಿಂದ ಪೂಜೆ ನಡೆಯಿತು.</p>.<p>ಗುರುವಾರ ಬೆಳಿಗ್ಗೆ ದೇವಸ್ಥಾನದಲ್ಲಿ ವಿವಿಧ ಪೂಜೆ ಸಲ್ಲಿಸಲಾಯಿತು. ಸಂಜೆ 4 ಗಂಟೆಗೆ ಸಿಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಿಡಿಗೂ ಮುನ್ನ ಆಡುವ ವ್ಯಕ್ತಿಯನ್ನು ಮೆರವಣಿಗೆಯಲ್ಲಿ ಆವರಣಕ್ಕೆ ಕರೆ ತರಲಾಯಿತು. ನಂತರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಿಡಿ ಕಂಬ ಪ್ರದಕ್ಷಿಣೆ ಹಾಕಿಸಲಾಯಿತು. ಸಿಡಿ ಆಡುವಾಗ ಅರಿಶಿನ, ಬೇವಿನ ಸೊಪ್ಪನ್ನು ಸಿಡಿ ಆಡುವಾತ ಭಕ್ತರಿಗೆ ಪ್ರೋಕ್ಷಣೆ ಮಾಡಿದರು. ನಂತರ 3 ಸುತ್ತು ಖಾಲಿ ಸಿಡಿ ಕಂಬವನ್ನು ಸುತ್ತಿಸಲಾಯಿತು.</p>.<p>ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ವಿಜಯನಗರ, ನೆರೆಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗಳಿಂದ ಅಪಾರ ಭಕ್ತರು ಪಾಲ್ಗೊಂಡಿದ್ದರು. ಶುಕ್ರವಾರ ಬೆಳಿಗ್ಗೆ ಮಹಾಮಂಗಳಾರತಿ ಸಲ್ಲಿಸಿ ದೇವಿಯನ್ನು ಗುಡಿದುಂಬಿಸುವ ಮೂಲಕ ಜಾತ್ರೆಗೆ ತೆರೆ ಬೀಳಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಜಿಲ್ಲೆಯ ಪ್ರಮುಖ ಸಿಡಿ ಉತ್ಸವಗಳಲ್ಲಿ ಒಂದಾದ ತಾಲ್ಲೂಕಿನ ರಾಯಾಪುರದ ಕೋಟೆಗುಡ್ಡ ಮಾರಮ್ಮದೇವಿ ಸಿಡಿ ಉತ್ಸವ ಗುರುವಾರ ಸಂಜೆ ವೈಭದಿಂದ ನಡೆಯಿತು.</p>.<p>ಪ್ರತಿವರ್ಷ ಶೂನ್ಯಮಾಸದಲ್ಲಿ ಈ ಜಾತ್ರೆ ನಡೆಸಿಕೊಂಡು ಬರಲಾಗುತ್ತಿದೆ. ಉತ್ಸವದ ಅಂಗವಾಗಿ ಮಂಗಳವಾರ ದೇವಿಯನ್ನು ಬುಡಕಟ್ಟು ಸಂಸ್ಕೃತಿಗಳ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ಗಂಗಾಪೂಜೆಗೆ ಕರೆದುಕೊಂಡು ಹೋಗಲಾಗಿತ್ತು. ವಾಪಸ್ ಬಂದ ನಂತರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಗಳನ್ನು ನಡೆಸಲಾಯಿತು. ಬುಧವಾರ ವಿರಪೋತರಾಜುಲು ಅವರಿಂದ ಪೂಜೆ ನಡೆಯಿತು.</p>.<p>ಗುರುವಾರ ಬೆಳಿಗ್ಗೆ ದೇವಸ್ಥಾನದಲ್ಲಿ ವಿವಿಧ ಪೂಜೆ ಸಲ್ಲಿಸಲಾಯಿತು. ಸಂಜೆ 4 ಗಂಟೆಗೆ ಸಿಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಿಡಿಗೂ ಮುನ್ನ ಆಡುವ ವ್ಯಕ್ತಿಯನ್ನು ಮೆರವಣಿಗೆಯಲ್ಲಿ ಆವರಣಕ್ಕೆ ಕರೆ ತರಲಾಯಿತು. ನಂತರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಿಡಿ ಕಂಬ ಪ್ರದಕ್ಷಿಣೆ ಹಾಕಿಸಲಾಯಿತು. ಸಿಡಿ ಆಡುವಾಗ ಅರಿಶಿನ, ಬೇವಿನ ಸೊಪ್ಪನ್ನು ಸಿಡಿ ಆಡುವಾತ ಭಕ್ತರಿಗೆ ಪ್ರೋಕ್ಷಣೆ ಮಾಡಿದರು. ನಂತರ 3 ಸುತ್ತು ಖಾಲಿ ಸಿಡಿ ಕಂಬವನ್ನು ಸುತ್ತಿಸಲಾಯಿತು.</p>.<p>ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ವಿಜಯನಗರ, ನೆರೆಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗಳಿಂದ ಅಪಾರ ಭಕ್ತರು ಪಾಲ್ಗೊಂಡಿದ್ದರು. ಶುಕ್ರವಾರ ಬೆಳಿಗ್ಗೆ ಮಹಾಮಂಗಳಾರತಿ ಸಲ್ಲಿಸಿ ದೇವಿಯನ್ನು ಗುಡಿದುಂಬಿಸುವ ಮೂಲಕ ಜಾತ್ರೆಗೆ ತೆರೆ ಬೀಳಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>