<p><strong>ಸಿರಿಗೆರೆ:</strong> ಕ್ರಿಕೆಟ್ ಅನ್ನು ಉದ್ಯಮವನ್ನಾಗಿ ಮಾಡಿಕೊಂಡು, ಆರ್ಸಿಬಿ ಆಟಗಾರರಿಗೆ ಏರ್ಪಡಿಸಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಆಗಿರುವ ಮುಗ್ಧ ಜನರ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಇ. ಜಗದೀಶ್ ಹೇಳಿದ್ದಾರೆ.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಐಪಿಎಲ್ ಆಟಗಾರರಿಗೆ ನಾಡು ನುಡಿ, ಪ್ರಾದೇಶಿಕ ಸೊಬಗಿನ ಅರಿವೇ ಇಲ್ಲ. ಯಾರು ಹೆಚ್ಚು ಹಣ ಕೊಡುತ್ತಾರೋ ಆ ತಂಡದಲ್ಲಿ ಆಡುವ ಇವರಿಗೆ ಬದ್ಧತೆಯೇ ಇರುವುದಿಲ್ಲ. ಇಂತಹವರಿಗೆ ರಾಜ್ಯ ಸರ್ಕಾರ ಸನ್ಮಾನ ಏರ್ಪಡಿಸಿದ್ದು ಸೂಕ್ತವಲ್ಲ’ ಎಂದಿದ್ದಾರೆ.</p>.<p>ಸರ್ಕಾರವೇ ಮುಂದೆ ನಿಂತು ಪ್ರೋತ್ಸಾಹಿಸುವುದು ಪರೋಕ್ಷವಾಗಿ ಯುವ ಪೀಳಿಗೆಯ ಬದುಕನ್ನು ಕಿತ್ತುಕೊಂಡಂತೆ. ಐಪಿಎಲ್ ಆಟವಾಗಿ ಉಳಿದಿಲ್ಲ. ಅದೊಂದು ಉದ್ಯಮ ಕ್ಷೇತ್ರವಷ್ಟೇ ಅಲ್ಲ, ಜೂಜು ಅಡ್ಡೆಯಾಗಿ ಬೇರೂರಿದೆ. ಇಂತಹ ಆಟಕ್ಕೆ ಸರ್ಕಾರ ಪ್ರೋತ್ಸಾಹಿಸಬಾರದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ಕ್ರಿಕೆಟ್ ಅನ್ನು ಉದ್ಯಮವನ್ನಾಗಿ ಮಾಡಿಕೊಂಡು, ಆರ್ಸಿಬಿ ಆಟಗಾರರಿಗೆ ಏರ್ಪಡಿಸಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಆಗಿರುವ ಮುಗ್ಧ ಜನರ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಇ. ಜಗದೀಶ್ ಹೇಳಿದ್ದಾರೆ.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಐಪಿಎಲ್ ಆಟಗಾರರಿಗೆ ನಾಡು ನುಡಿ, ಪ್ರಾದೇಶಿಕ ಸೊಬಗಿನ ಅರಿವೇ ಇಲ್ಲ. ಯಾರು ಹೆಚ್ಚು ಹಣ ಕೊಡುತ್ತಾರೋ ಆ ತಂಡದಲ್ಲಿ ಆಡುವ ಇವರಿಗೆ ಬದ್ಧತೆಯೇ ಇರುವುದಿಲ್ಲ. ಇಂತಹವರಿಗೆ ರಾಜ್ಯ ಸರ್ಕಾರ ಸನ್ಮಾನ ಏರ್ಪಡಿಸಿದ್ದು ಸೂಕ್ತವಲ್ಲ’ ಎಂದಿದ್ದಾರೆ.</p>.<p>ಸರ್ಕಾರವೇ ಮುಂದೆ ನಿಂತು ಪ್ರೋತ್ಸಾಹಿಸುವುದು ಪರೋಕ್ಷವಾಗಿ ಯುವ ಪೀಳಿಗೆಯ ಬದುಕನ್ನು ಕಿತ್ತುಕೊಂಡಂತೆ. ಐಪಿಎಲ್ ಆಟವಾಗಿ ಉಳಿದಿಲ್ಲ. ಅದೊಂದು ಉದ್ಯಮ ಕ್ಷೇತ್ರವಷ್ಟೇ ಅಲ್ಲ, ಜೂಜು ಅಡ್ಡೆಯಾಗಿ ಬೇರೂರಿದೆ. ಇಂತಹ ಆಟಕ್ಕೆ ಸರ್ಕಾರ ಪ್ರೋತ್ಸಾಹಿಸಬಾರದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>