<p><strong>ಸಿರಿಗೆರೆ:</strong> ‘ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಕಲಿಸಬೇಕು. ಕನ್ನಡವೇ ನಮ್ಮ ಪ್ರಧಾನ ಭಾಷೆ’ ಎಂದು ಅರೇಕಾ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಜಿ.ಎಂ. ಪ್ರಸನ್ನಕುಮಾರ್ ತಿಳಿಸಿದರು.</p>.<p>ಭೀಮ ಸಮುದ್ರದ ಭೀಮೇಶ್ವರ ಬಾಲವಿಕಾಸ ಹಿರಿಯ ಪ್ರಾಥಮಿಕ ಶಾಲೆಗೆ 40 ವರ್ಷಗಳು ತುಂಬಿದ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇಂಗ್ಲಿಷ್ ಭಾಷೆಯ ವ್ಯಾಮೋಹ ಎಲ್ಲ ಕಡೆ ಹೆಚ್ಚಾಗಿದೆ. ಮಕ್ಕಳಿಗೆ ಮೊದಲು ಕನ್ನಡ ಕಲಿಸೋಣ. ನಂತರ ಅವರು ಬೇರೆ ಭಾಷೆಗಳನ್ನು ಕಲಿಯುತ್ತಾರೆ’ ಎಂದರು.</p>.<p>ಮಕ್ಕಳು ಮೊಬೈಲ್, ಟಿ.ವಿ, ಬಳಸುವುದನ್ನು ಕಡಿಮೆ ಮಾಡಿ ಶಾಲಾ ಪುಸ್ತಕಗಳ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದರು.</p>.<p>‘ಗ್ರಾಮದ ಹಿರಿಯರು ಮಕ್ಕಳ ಅಭ್ಯುದಯಕ್ಕೆ ಆರಂಭಿಸಿದ ಶಾಲೆಗೆ ಈಗ 40 ವರ್ಷಗಳು ತುಂಬಿವೆ. ಇಲ್ಲಿ ಕಲಿತಿರುವ ವಿದ್ಯಾರ್ಥಿಗಳು ಹಲವು ಕಡೆ ಉನ್ನತ ಸ್ಥಾನಗಳಲ್ಲಿದ್ದಾರೆ. ಅವರಂತೆಯೇ ಈಗಿನ ವಿದ್ಯಾರ್ಥಿಗಳೂ ಬಹಳ ಎತ್ತರಕ್ಕೆ ಬೆಳೆಯಬೇಕು’ ಎಂದು ಉದ್ಯಮಿ ಜಿ.ಎಸ್. ಮಂಜುನಾಥ್ ಸಲಹೆ ನೀಡಿದರು.</p>.<p>ಬಾಲ ವಿಕಾಸ ಸಂಸ್ಥೆಯ ಅಧ್ಯಕ್ಷ ಜಿ.ಎಂ. ಧನ್ಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಜಿ.ಎಸ್. ಅನಿತ್ ಕುಮಾರ್, ಬಿ.ಟಿ. ಪುಟ್ಟಪ್ಪ, ಟಿ.ಎಸ್. ಪ್ರಭುದೇವ್, ತಿಪ್ಪೇಸ್ವಾಮಿ, ಮಂಜುನಾಥ್, ಟಿ.ಎಸ್. ರಾಜಶೇಖರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಶರತ್ ಪಟೇಲ್, ಎಲ್.ಕೆ. ಸುಮಾ ಮತ್ತಿತರರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ‘ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಕಲಿಸಬೇಕು. ಕನ್ನಡವೇ ನಮ್ಮ ಪ್ರಧಾನ ಭಾಷೆ’ ಎಂದು ಅರೇಕಾ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಜಿ.ಎಂ. ಪ್ರಸನ್ನಕುಮಾರ್ ತಿಳಿಸಿದರು.</p>.<p>ಭೀಮ ಸಮುದ್ರದ ಭೀಮೇಶ್ವರ ಬಾಲವಿಕಾಸ ಹಿರಿಯ ಪ್ರಾಥಮಿಕ ಶಾಲೆಗೆ 40 ವರ್ಷಗಳು ತುಂಬಿದ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇಂಗ್ಲಿಷ್ ಭಾಷೆಯ ವ್ಯಾಮೋಹ ಎಲ್ಲ ಕಡೆ ಹೆಚ್ಚಾಗಿದೆ. ಮಕ್ಕಳಿಗೆ ಮೊದಲು ಕನ್ನಡ ಕಲಿಸೋಣ. ನಂತರ ಅವರು ಬೇರೆ ಭಾಷೆಗಳನ್ನು ಕಲಿಯುತ್ತಾರೆ’ ಎಂದರು.</p>.<p>ಮಕ್ಕಳು ಮೊಬೈಲ್, ಟಿ.ವಿ, ಬಳಸುವುದನ್ನು ಕಡಿಮೆ ಮಾಡಿ ಶಾಲಾ ಪುಸ್ತಕಗಳ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದರು.</p>.<p>‘ಗ್ರಾಮದ ಹಿರಿಯರು ಮಕ್ಕಳ ಅಭ್ಯುದಯಕ್ಕೆ ಆರಂಭಿಸಿದ ಶಾಲೆಗೆ ಈಗ 40 ವರ್ಷಗಳು ತುಂಬಿವೆ. ಇಲ್ಲಿ ಕಲಿತಿರುವ ವಿದ್ಯಾರ್ಥಿಗಳು ಹಲವು ಕಡೆ ಉನ್ನತ ಸ್ಥಾನಗಳಲ್ಲಿದ್ದಾರೆ. ಅವರಂತೆಯೇ ಈಗಿನ ವಿದ್ಯಾರ್ಥಿಗಳೂ ಬಹಳ ಎತ್ತರಕ್ಕೆ ಬೆಳೆಯಬೇಕು’ ಎಂದು ಉದ್ಯಮಿ ಜಿ.ಎಸ್. ಮಂಜುನಾಥ್ ಸಲಹೆ ನೀಡಿದರು.</p>.<p>ಬಾಲ ವಿಕಾಸ ಸಂಸ್ಥೆಯ ಅಧ್ಯಕ್ಷ ಜಿ.ಎಂ. ಧನ್ಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಜಿ.ಎಸ್. ಅನಿತ್ ಕುಮಾರ್, ಬಿ.ಟಿ. ಪುಟ್ಟಪ್ಪ, ಟಿ.ಎಸ್. ಪ್ರಭುದೇವ್, ತಿಪ್ಪೇಸ್ವಾಮಿ, ಮಂಜುನಾಥ್, ಟಿ.ಎಸ್. ರಾಜಶೇಖರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಶರತ್ ಪಟೇಲ್, ಎಲ್.ಕೆ. ಸುಮಾ ಮತ್ತಿತರರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>