<p><strong>ಸಿರಿಗೆರೆ</strong>: ‘ಡಿ.ಎಂ.ಎಫ್ ನಿಧಿಯಡಿ ₹ 8 ಕೋಟಿ ವೆಚ್ಚದಲ್ಲಿ ಎರಡು ತಿಂಗಳ ಹಿಂದಷ್ಟೇ ನಿರ್ಮಾಣಗೊಂಡಿದ್ದ ಕಾಂಕ್ರೀಟ್ ರಸ್ತೆ ಕಳಪೆಯಾಗಿದೆ’ ಎಂದು ಕರುನಾಡು ರಾಷ್ಟ್ರೀಯ ಹೋರಾಟ ಸಮಿತಿ ಆರೋಪಿಸಿದೆ.</p>.<p>‘ಜಿಲ್ಲಾ ಮುಖ್ಯ ರಸ್ತೆಯಿಂದ ದೊಡ್ಡಿಗನಾಳ್–ಹೊಸಹಟ್ಟಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಕಳಪೆಯಾಗಿದೆ. ರಸ್ತೆಯ ಉದ್ದಕ್ಕೂ ಬಿರುಕು ಕಾಣಿಸಿಕೊಂಡಿವೆ. ಕೆಲವೆಡೆ ರಸ್ತೆ ಕಿತ್ತು ಬಂದಿದ್ದು, ನಿರ್ಮಾಣಕ್ಕೆ ಬಳಸಲಾಗಿರುವ ಕಾಂಕ್ರಿಟ್ನ ಗುಣಮಟ್ಟವನ್ನು ತೋರಿಸುತ್ತಿದೆ’ ಎಂದು ದೂರಿದರು.</p>.<p>‘ಈಗ ತಾನೆ ಮಳೆಗಾಲ ಆರಂಭವಾಗುತ್ತಿದೆ. ಭಾರಿ ಮಳೆಯಾದರೆ ರಸ್ತೆ ಸಂಪೂರ್ಣವಾಗಿ ಹಾಳಾಗಿ ಹೋಗುತ್ತದೆ’ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.</p>.<p>‘ಬೆಂಗಳೂರಿನ ಗುತ್ತಿಗೆದಾರರು ಈ ರಸ್ತೆಯನ್ನು ನಿರ್ಮಾಣ ಮಾಡಿದ್ದು, ಅವರಿಂದಲೇ ಈ ಕಾಮಗಾರಿಯನ್ನು ಮರು ನಿರ್ಮಾಣ ಮಾಡಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಬೃಹತ್ ವಾಹನಗಳು ಚಲಿಸಿದರೆ ರಸ್ತೆಗಳು ಹಾಳಾಗುವುದು ಸಹಜ. ದೊಡ್ಡಿಗನಾಳ್ ಗ್ರಾಮದಲ್ಲೂ ಈ ರೀತಿಯೇ ಆಗಿದೆ’ ಎಂದು ಈ ರಸ್ತೆಯ ಮೇಲ್ವಿಚಾರಣೆ ನಡೆಸಿರುವ ಎಂಜಿನಿಯರ್ ಮೊಹಮ್ಮದ್ ರಫೀಕ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-44-705044187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ‘ಡಿ.ಎಂ.ಎಫ್ ನಿಧಿಯಡಿ ₹ 8 ಕೋಟಿ ವೆಚ್ಚದಲ್ಲಿ ಎರಡು ತಿಂಗಳ ಹಿಂದಷ್ಟೇ ನಿರ್ಮಾಣಗೊಂಡಿದ್ದ ಕಾಂಕ್ರೀಟ್ ರಸ್ತೆ ಕಳಪೆಯಾಗಿದೆ’ ಎಂದು ಕರುನಾಡು ರಾಷ್ಟ್ರೀಯ ಹೋರಾಟ ಸಮಿತಿ ಆರೋಪಿಸಿದೆ.</p>.<p>‘ಜಿಲ್ಲಾ ಮುಖ್ಯ ರಸ್ತೆಯಿಂದ ದೊಡ್ಡಿಗನಾಳ್–ಹೊಸಹಟ್ಟಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಕಳಪೆಯಾಗಿದೆ. ರಸ್ತೆಯ ಉದ್ದಕ್ಕೂ ಬಿರುಕು ಕಾಣಿಸಿಕೊಂಡಿವೆ. ಕೆಲವೆಡೆ ರಸ್ತೆ ಕಿತ್ತು ಬಂದಿದ್ದು, ನಿರ್ಮಾಣಕ್ಕೆ ಬಳಸಲಾಗಿರುವ ಕಾಂಕ್ರಿಟ್ನ ಗುಣಮಟ್ಟವನ್ನು ತೋರಿಸುತ್ತಿದೆ’ ಎಂದು ದೂರಿದರು.</p>.<p>‘ಈಗ ತಾನೆ ಮಳೆಗಾಲ ಆರಂಭವಾಗುತ್ತಿದೆ. ಭಾರಿ ಮಳೆಯಾದರೆ ರಸ್ತೆ ಸಂಪೂರ್ಣವಾಗಿ ಹಾಳಾಗಿ ಹೋಗುತ್ತದೆ’ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.</p>.<p>‘ಬೆಂಗಳೂರಿನ ಗುತ್ತಿಗೆದಾರರು ಈ ರಸ್ತೆಯನ್ನು ನಿರ್ಮಾಣ ಮಾಡಿದ್ದು, ಅವರಿಂದಲೇ ಈ ಕಾಮಗಾರಿಯನ್ನು ಮರು ನಿರ್ಮಾಣ ಮಾಡಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಬೃಹತ್ ವಾಹನಗಳು ಚಲಿಸಿದರೆ ರಸ್ತೆಗಳು ಹಾಳಾಗುವುದು ಸಹಜ. ದೊಡ್ಡಿಗನಾಳ್ ಗ್ರಾಮದಲ್ಲೂ ಈ ರೀತಿಯೇ ಆಗಿದೆ’ ಎಂದು ಈ ರಸ್ತೆಯ ಮೇಲ್ವಿಚಾರಣೆ ನಡೆಸಿರುವ ಎಂಜಿನಿಯರ್ ಮೊಹಮ್ಮದ್ ರಫೀಕ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-44-705044187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>