ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಪ್ರಕಾಶ್ ಅವರು, ಸಿದ್ದಾಪುರ ಮತ್ತು ದೊಡ್ಡಿಗನಾಳ್ ಗ್ರಾಮಕ್ಕೆ ಕೇರಳ ಮತ್ತು ಬೆಂಗಳೂರಿನಿಂದ ಹಬ್ಬಕ್ಕೆಂದು ಬಂದಿರುವ ಜನರನ್ನು ಕಂಡು ಸಿರಿಗೆರೆ ಆರೋಗ್ಯ ಕೇಂದ್ರಕ್ಕೆ ತಕ್ಷಣವೇ ಮಾಹಿತಿ ನೀಡಿದರು. ನಾವು ಸ್ಥಳಕ್ಕೆ ಭೇಟಿ ನೀಡಿ ಸಿದ್ದಾಪುರದಲ್ಲಿ 11 ಜನ ಮತ್ತು ದೊಡ್ಡಿಗನಾಳ್ ಗ್ರಾಮದಲ್ಲಿ 22 ಜನ ಸ್ವಂತ ಊರಿಗೆ ಬಂದಿದ್ದಾರೆ. ಇವರಲ್ಲಿ ಕೆಲವರು ಕೇರಳದ ಗಣಿ ಮತ್ತು ಕಲ್ಲು ಕೊರೆಯುವ ಕೆಲಸ ಹಾಗೂ ಇನ್ನು ಕೆಲವರು ಬೆಂಗಳೂರಿನ ಕಂಪನಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಅಗತ್ಯ ಮಾಹಿತಿ ಸಂಗ್ರಹಿಸಿದ್ದು, ಅವರ ಜತೆ ಬಂದ ಸ್ನೇಹಿತರ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದೇವೆ. ಕೊರೊನಾ ಶಂಕಿತ ವ್ಯಕ್ತಿ ಇದ್ದರೆ ಪೊಲೀಸರಿಗೆ ಮಾಹಿತಿ ನೀಡುತ್ತೇವೆ’ ಎಂದರು.