<p><strong>ಸಿರಿಗೆರೆ</strong>: ಸಮೀಪದ ಲಕ್ಷ್ಮೀಸಾಗರ ಗ್ರಾಮದ ಜಮೀನಿನಲ್ಲಿ ಶನಿವಾರ ಮಧ್ಯರಾತ್ರಿ ಮೆಕ್ಕೆಜೋಳದ ರಾಶಿಗೆ ಬೆಂಕಿ ಬಿದ್ದಿದ್ದು, 22 ಲೋಡ್ ಮೆಕ್ಕೆಜೋಳದ ತೆನೆ ಸಂಪೂರ್ಣ ಸುಟ್ಟು ಕರಕಲಾಗಿದೆ.</p>.<p>ಗ್ರಾಮದ ರೈತ ಧನಂಜಯಪ್ಪ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿ ಬೆಂಕಿಗೆ ಆಹುತಿಯಾಗಿದೆ. </p>.<p>ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋಗುವ ಗ್ರಾಮಸ್ಥರು ಬೆಂಕಿಯನ್ನು ನೋಡಿ ಕೂಡಲೇ ರೈತನಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರ ಸಹಾಯದಿಂದ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಅಷ್ಟೊತ್ತಿಗೆ ಮೆಕ್ಕೆಜೋಳ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.</p>.<p>ಅಂದಾಜು ₹ 4 ರಿಂದ ₹ 5 ಲಕ್ಷ ನಷ್ಟವಾಗಿದ್ದು, ರೈತ ಆತಂಕಕ್ಕೆ ಒಳಗಾಗಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ.</p>.<p>ಭಾನುವಾರ ಬೆಳಿಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ತಾಲ್ಲೂಕು ಕಚೇರಿಯ ಅಧಿಕಾರಿಗಳು ಹಾಗೂ ಭರಮಸಾಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ಸಮೀಪದ ಲಕ್ಷ್ಮೀಸಾಗರ ಗ್ರಾಮದ ಜಮೀನಿನಲ್ಲಿ ಶನಿವಾರ ಮಧ್ಯರಾತ್ರಿ ಮೆಕ್ಕೆಜೋಳದ ರಾಶಿಗೆ ಬೆಂಕಿ ಬಿದ್ದಿದ್ದು, 22 ಲೋಡ್ ಮೆಕ್ಕೆಜೋಳದ ತೆನೆ ಸಂಪೂರ್ಣ ಸುಟ್ಟು ಕರಕಲಾಗಿದೆ.</p>.<p>ಗ್ರಾಮದ ರೈತ ಧನಂಜಯಪ್ಪ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿ ಬೆಂಕಿಗೆ ಆಹುತಿಯಾಗಿದೆ. </p>.<p>ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋಗುವ ಗ್ರಾಮಸ್ಥರು ಬೆಂಕಿಯನ್ನು ನೋಡಿ ಕೂಡಲೇ ರೈತನಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರ ಸಹಾಯದಿಂದ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಅಷ್ಟೊತ್ತಿಗೆ ಮೆಕ್ಕೆಜೋಳ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.</p>.<p>ಅಂದಾಜು ₹ 4 ರಿಂದ ₹ 5 ಲಕ್ಷ ನಷ್ಟವಾಗಿದ್ದು, ರೈತ ಆತಂಕಕ್ಕೆ ಒಳಗಾಗಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ.</p>.<p>ಭಾನುವಾರ ಬೆಳಿಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ತಾಲ್ಲೂಕು ಕಚೇರಿಯ ಅಧಿಕಾರಿಗಳು ಹಾಗೂ ಭರಮಸಾಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>